Dec 5, 2011

ಹಳಗನ್ನಡ

ಹಳೆಗನ್ನಡವನ್ನು ರಾಷ್ಟ್ರಕೂಟ ಸಾಹಿತ್ಯವೆಂದೂ .(Sanskrit:राष्ट्रकूट) ಕರೆಯುವ ಭಾಷೆಯು ೮ ರಿಂದ ೧೧ನೇ ಶತಮಾನಗಳಲ್ಲಿ ದಕ್ಷಿಣ ಭಾರತ ಮತ್ತು ಮಧ್ಯ ಭಾರತವನ್ನು ಆಳಿದ ರಾಷ್ಟ್ರಕೂಟರ ಕಾಲದಲ್ಲಿ ಪ್ರಚಲಿತವಿದ್ದ ದ್ರಾವಿಡ ಭಾಷೆಗಳಲ್ಲೊಂದು. ಆ ಕಾಲದ ಆಳ್ವಿಕೆಯು ದಕ್ಷಿ‌ಣ ಭಾರತದ ಇತಿಹಾಸದಲ್ಲಿ ಸಾಹಿತ್ಯದ, ಅದರಲ್ಲೂ ಕನ್ನಡ ಸಾಹಿತ್ಯದ ಮಹತ್ವದ ಘಟ್ಟವಾಗಿತ್ತು. ಆ ಕಾಲವು ಪ್ರಾಕ್ರಿತ ಹಾಗೂ ಸಂಸ್ಕೃತ ಭಾಷೆಯ ಅಂತ್ಯವೆಂದು, ಕನ್ನಡ ಭಾಷೆಯಲ್ಲಿ ರಚಿತವಾದ ಮಹತ್ವದ ಗ್ರಂಥಗಳೇ ಸಾಕ್ಷಿಯಾಗಿವೆ. ಕನ್ನಡದ ಶ್ರೇಷ್ಠ ಕವಿಗಳಿಗೆ ರಾಷ್ಟ್ರಕೂಟರ ದರ್ಬಾರಿನಲ್ಲಿ ಮಹತ್ವದ ಸ್ಥಾನ ದೊರಕಿ, ಕವಿಗಳು ಹಾಗೂ ರಾಜರು ಪದ್ಯ, ಹಿಂದು ಗ್ರಂಥ, ಜೈನ್ ಗ್ರಂಥ (ತೀರ್ಥಂಕರ)ಗಳು ಶ್ರೇಷ್ಠ ಸಾಹಿತ್ಯಗಳಾಗಿ ಹೊರಹೊಮ್ಮಿದವು.
ಆದಿಕವಿ ಪಂಪ, ರನ್ನರ ಕಾಲದಲ್ಲಿ ಬಹಳವಾಗಿ ಪ್ರಚಲಿತವಾಗಿದ್ದ ಈ ಭಾಷೆಯು ಕಾಲಕ್ರಮೇಣ, ನಡುಗನ್ನಡವಾಗಿ ಮಾರ್ಪಟ್ಟು ನಂತರ ಕನ್ನಡ ಭಾಷೆಯಾಗಿ ರೂಪುಗೊಂಡಿತು.
ಆದಿಕವಿ ಪಂಪನ ಪಂಪಭಾರತ, ರನ್ನನ ಸಾಹಸಭೀಮ ವಿಜಯಂ(ಗದಾಯುದ್ಧ) ಮೊದಲಾದ ಕೃತಿಗಳು ಹಳೆಗನ್ನಡದಲ್ಲಿಯೇ ರಚಿತವಾದದ್ದು.
ನೃಪತುಂಗನ ಕಾಲದಲ್ಲಿ ರಚನೆಯಾದ ” ಕವಿರಾಜಮಾರ್ಗ ” ಎಂಬ ಗ್ರಂಥವೇ ಕನ್ನಡದ ಪ್ರಾಚೀನ ಸಾಹಿತ್ಯ ಪದ್ಯ ಗ್ರಂಥ ಎಂದು ಕನ್ನಡ ಸಾರಸ್ವತ ಲೋಕದ ದಿಗ್ಗಜರು ನಿರ್ಣಯಿಸುವ ಮೂಲಕ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ ಎಂದು ಹೇಳುತ್ತಿದ್ದಾರೆ.
ಹಲ್ಮಿಡಿ ಶಾಸನ {A replica of the original Halmidi inscription at Halmidi village}
” ಸಿರಿಭೂವಲಯ ” ಗ್ರಂಥದಲ್ಲಿ ಕನ್ನಡದ ಪ್ರಾಚೀನತೆಯ ಬಗ್ಗೆ ಖಚಿತವಾದ ಹೇಳಿಕೆಗಳಿವೆ. 24ನೇ ತೀರ್ಥಂಕರ ಮಹಾವೀರರು ಕನ್ನಡ ಭಾಷೆಯಲ್ಲಿ ನೀಡಿರುವ ಉಪದೇಶಗಳ ಸಾರವೇ ಈ ಗ್ರಂಥದ ಮೂಲವೆಂದು ಕವಿ ಕುಮದೇಯಮುನಿ ಸ್ಪಷ್ಟವಾಗಿ ಸೂಚಿಸಿದ್ದು, ಇದು ಕನ್ನಡ ಭಾಷೆಯು 2300 ವರ್ಷಗಳ ಹಿಂದಿನ ಇತಿಹಾಸ ಹೊಂದಿರುವುದಕ್ಕೆ ಸಾಕ್ಷಿಯಾಗಿದೆ.
ಆದಿ ತೀರ್ಥಂಕರ ವೃಷಭ ದೇವನು ತನ್ನ ಕುಮಾರಿಯಾದ ಬ್ರಾಹ್ಮೀ ಸೌಂದರಿಯರಿಗೆ ಕನ್ನಡ ಆಂಕಾಕ್ಷರ ಗಳನ್ನು ವಿವರಿಸಿದ ಕಾರಣದಿಂದಾಗಿ ಈ ಅಕ್ಷರ ಲಿಪಿಗೆ “ಬ್ರಾಹ್ಮೀ ಲಿಪಿ “ಎಂದೂ , ಅಂಕ ಲಿಪಿಗೆ “ಸೌಂದರಿ ಲಿಪಿ “ಎಂದೂ ಹೆಸರಾಗಿದೆ . ಈ ಖಚಿತವಾದ ಮಾಹಿತಿಯನ್ನು “ಸಿರಿಭೂವಲಯ”ವು ಬಹಳ ಸ್ಪಷ್ಟವಾಗಿ ತಿಳಿಸಿದೆ

Nov 19, 2011

ಪ್ರಶ್ನೋತ್ತರ ಮಾಲಿಕೆ - 10

1. ಸಣ್ಣ ಕಥೆಗಳ ಜನಕ ಎಂದುಮಾಸ್ತಿ ವೆಂಕಟೇಶ ಅಯ್ಯಂಗಾರ್ರವರನ್ನ ಕರೆಯುತ್ತಾರೆ.


2. ಬಾಣನಕಾದಂಬರಿಕೃತಿಯ ಆಧಾರದಿಂದ ಕನ್ನಡದ ಒಂದನೇ ನಾಗವರ್ಮನು ಚಂಪೂ ಶಾಲಿಯಲ್ಲಿಕರ್ನಾಟಕ ಕಾದಂಬರಿಯನ್ನು ರಚಿಸಿದರು.

3.  ರಾಮಾಯಣವನ್ನು ರಚಿಸಿದ ಮಹರ್ಷಿ ಎಂದುವಾಲ್ಮಿಕಿಕವಿಯನ್ನ ಕರೆಯುತ್ತಾರೆ.


4. ನಾಮಪದ ಕ್ರಿಯಾಪದಗಳಂತೆ ಲಿಂಗ ವಚನ ವಿಭಕ್ತಿಗಳಿಂದ ರೂಪಭೇದವನ್ನು ಹೊಂದದೇ ಏಕರೂಪವಾಗಿರುವ ಶಬ್ದಗಳಿಗೆಅವ್ಯಯಗಳುಎಂದು ಕರೆಯುವರು.

5. ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಏಪ್ರಿಲ್ 2 ”.

6. ಸೂರ್ಯ ಉದಯಿಸುವ ನಾಡು ಎಂದುಜಪಾನ್”.

7. ಕರ್ನಾಟಕದಲ್ಲಿ ಸುಮಾರು 300 – 320 ರಷ್ಟು ಹುಲಿಗಳಿದ್ದು ದೇಶದಲ್ಲಿಯೆ ಹೆಚ್ಚು ಸಂಖ್ಯೆಯ ಹುಲಿಗಳನ್ನು ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

8. ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಕೃಷಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

9. ಬಂಡೀಪುರ ಉದ್ಯಾನವನ- ಕರ್ನಾಟಕ ಮತ್ತು ತಮಿಳು ನಾಡಿನ ಗಡಿ ಪ್ರದೇಶ.

10.ರಿಜರ್ವ್ ಬ್ಯಾಂಕ್ ಆಪ್ ಇಂಡಿಯಾ - ಸ್ಥಾಪನೆ :ಎಪ್ರಿಲ್ 1, 1935 ( ಜನವರಿ 1, 1949 ರಂದು ರಾಷ್ಟ್ರೀಕರಣ ಗೊಳಿಸಲಾಯಿತು. ) 

Nov 18, 2011

ಕನ್ನಡಕ್ಕೆ ಮೊದಲ ಸರಸ್ವತಿ ಸನ್ಮಾನ


ಕನ್ನಡಕ್ಕೆ ಮೊದಲ ಸರಸ್ವತಿ ಸನ್ಮಾನವನ್ನ ತಂದು ಕೊಟ್ಟಿರುವ ಎಸ್ ಎಲ್ ಭೈರಪ್ಪನವರಿಗೆ ಧನ್ಯವಾದಗಳು  

Nov 16, 2011

ಪ್ರಶ್ನೋತ್ತರ ಮಾಲಿಕೆ - 9

1. ಮೈಸೂರು ರಾಜ್ಯಕ್ಕೆ ಮೊದಲ ಮುಖ್ಯಮಂತ್ರಿ ಬಂಗಾರಪೇಟೆ ತಾಲ್ಲೂಕಿನ ಕ್ಯಾಸಂಬಳ್ಳಿ ಗ್ರಾಮದಕೆ.ಚಂಗಲರಾ ರೆಡ್ಡಿ ”.


2.ವಿಶ್ವದಲ್ಲಿಯೆ ಅತ್ಯಂತ ಅಧಿಕ ಯುರೇನಿಯಂ ನಿಕ್ಷೇಪಆಸ್ಟ್ರೇಲಿಯಾದಲ್ಲಿದೆ.


3. ಭಾರತದ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿಗೆ ಇರುವ ಅಧಿಕಾರದ ಬಗ್ಗೆ ಸಂವಿಧಾನದ 368 ನೇ ಅನುಚ್ಛೇದದಲ್ಲಿ ವಿವರಿಸಲಾಗಿದೆ.


4. ಸುನಾಮಿ ಎಂದರೆ “ ಅಲೆಗಳ ಬೀಭತ್ಸ್ಯಎಂದು ಅರ್ಥ.

5. ಸೂರ್ಯನ ನಂತರ ನಮಗೆ ಅತ್ಯಂತ ಹತ್ತಿರವಿರುವ ನಕ್ಷತ್ರವೆಂದರೆಫಾಕ್ಸಿಮಾ ಸೆಂಟಾರಿ ”.

6. ಜೇಡಿಮಣ್ಣು ಮತ್ತು ಅಲ್ಯೂಮಿನಿಯಂ ಸಿಲಿಕೇಟ್ ಸಂಯುಕ್ತಗಳ ಮಿಶ್ರಣದಿಂದಪಿಂಗಾಣಿವಸ್ತು ತಯಾರಿಸುತ್ತಾರೆ.

7. ಉತ್ತರ ಭಾರತದ ಮಹಾ ಮೈದಾನದ ನೈರುತ್ಯಕ್ಕೆ ಇರುವ ಮರುಭಾಮಿಥಾರ್ ಮರುಭೂಮಿ ”.


8. ಉತ್ತರ ಕರ್ನಾಟಕದಿಂದ ದಕ್ಷಿಣದ ಕನ್ಯಾಕುಮಾರಿಯವರೆಗೆ ಸುಮಾರು 550 .ಕಿ.ಮೀ. ಉದ್ದವಾಗಿರುವ ಕರಾವಳಿ ಮೈದಾನಮಲಬಾರ್ ”.


9.ಕಪ್ಪೆ ಅರಭಟ್ಟನ ಶೌರ್ಯ ಪರಾಕ್ರಮಗಳ ಬಗ್ಗೆ ಉಲ್ಲೇಖವಿರುವ ಶಾಸನಬಾದಾಮಿ ಶಾಸನ ”.


10. ಬಾದಾಮಿ ಶಾಸನ ಬಿಜಾಪುರ ಜಿಲ್ಲೆಯ ಬಾದಾಮಿಯಲ್ಲಿರುವ ಕನ್ನಡದ ಪ್ರಮುಖ ಶಾಸನ ಇದರ ಕಾಲ ಸುಮಾರು ಕ್ರಿ..7 ನೇ ಶತಮಾನ.

Nov 5, 2011

ಕನ್ನಡದ / ಕರ್ನಾಟಕದ ಮೊದಲಿಗರು

ಕನ್ನಡದ ಮೊದಲುಗಳು
ದೊರೆ - ಮಯೂರವರ್ಮ

ಗಣಿತ ಶಾಸ್ತ್ರಜ್ಞ - ಮಹಾವೀರಾಚಾರ್ಯ

ವಚನಗಾರ - ದೇವರದಾಸಿಮಯ್ಯ

ಕನ್ನಡ ಅಕ್ಷರ ಅಚ್ಚಿನಮೊಳೆ ವಿನ್ಯಾಸ - ಅತ್ತಾವರ ಅನಂತಾಚಾರಿ

ಕನ್ನಡ ಬೆರಳಚ್ಚು ಯಂತ್ರ / ಕೀಲಿಮಣೆ -  ಅನಂತ ಸುಬ್ಬರಾವ್

ಕನ್ನಡ ಲಿಪಿಯನ್ನ ಕಂಪ್ಯೂಟರ್ ಗಳವಡಿಸಿ ಸರಳ FONT ರಚನೆ - ಕೆ.ಪಿ.ರಾವ್

ಕನ್ನಡ ಶೀಘ್ರಲಿಪಿ - ರೆವರೆಂಡ್ ಬಿ.ಲೂಥಿ

ಪ್ರಾಧ್ಯಾಪಕ - ಟಿ.ಎಸ್.ವೆಂಕಣ್ಣಯ್ಯ

ರಾಜಕೀಯ / ಅತ್ಯುನ್ನತ ಹುದ್ದೆ

ಸೇನಾ ದಂಡನಾಯಕ - ಕೆ.ಎಂ.ಕಾರ್ಯಪ್ಪ

ಪ್ರಧಾನಮಂತ್ರಿ - ಹೆಚ್.ಡಿ.ದೇವೇಗೌಡ

ರಾಜ್ಯಪಾಲ - ಜಯಚಾಮರಾಜೇಂದ್ರ ಒಡೆಯರ್



ಮುಖ್ಯಮಂತ್ರಿ - ಕೆ.ಸಿ.ರೆಡ್ಡಿ 

ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ - ಎಸ್.ನಿಜಲಿಂಗಪ್ಪ


ಪ್ರಶಸ್ತಿ ವಿಜೇತರು
ಭಾರತರತ್ನ ಪ್ರಶಸ್ತಿ ವಿಜೇತರು - ಸರ್ ಎಂ.ವಿಶ್ವೇಶ್ವರಯ್ಯ


ಮ್ಯಾಗ್ಸೆಸೇ ಪ್ರಶಸ್ತಿ ವಿಜೇತರು - ಕೆ.ವಿ.ಸುಬ್ಬಣ್ಣ

ಜ್ಞಾನಪೀಠ ಪ್ರಶಸ್ತಿ ವಿಜೇತರು - ಕುವೆಂಪು

ಪಂಪ ಪ್ರಶಸ್ತಿ ವಿಜೇತರು - ಕುವೆಂಪು

ರಾಷ್ಟ್ರಕವಿ - ಗೋವಿಂದ ಪೈ

ಕಾಳಿದಾಸ್ ಸಮ್ಮಾನ್ ವಿಜೇತರು - ಮಲ್ಲಿಕಾರ್ಜುನ ಮನ್ಸೂರ್

ಕಬೀರ್ ಸಮ್ಮಾನ್ ವಿಜೇತರು - ಗೋಪಾಲಕೃಷ್ಣ ಅಡಿಗ

ಜಮನ್ ಲಾಲ್ ಪ್ರಶಸ್ತಿ ವಿಜೇತರು - ತಗಡೂರು ರಾಮಚಂದ್ರರಾವ್

ಗೋಯೆಂಕಾ ಪ್ರಶಸ್ತಿ ವಿಜೇತರು - ಪಾ.ವೆಂ.ಆಚಾರ್ಯ

ರಾಷ್ಟ್ರ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದ - ಹಾರಾಡಿ ರಾಮಗಾಣಿಗ 

ಕನ್ನಡ ಕೆಲಸಕ್ಕೆ ಡಾಕ್ಟರೇಟ್ - ಫರ್ಡಿನೆಂಡ್ ಕಿಟ್ಟೆಲ್

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ


ಪುಸ್ತಕ ಪ್ರಕಾಶನಕ್ಕೆ ಪದ್ಮಶ್ರೀ - ಜಿ.ಬಿ.ಜೋಷಿ


ಸೋವಿಯತ್ ಲ್ಯಾಂಡ್ ಪ್ರಶಸ್ತಿ - ಬಸವರಾಜ್ ಕಟ್ಟಿಮನಿ 



ಮೊದಲಿಗ ಮಹಿಳೆಯರು


ವಚನಗಾರ್ತಿ - ಅಕ್ಕಮಹಾದೇವಿ

ಪತ್ರಕರ್ತೆ / ಪ್ರಕಾಶಕಿ - ನಂಜನಗೂಡು ತಿರುಮಲಾಂಬಾ

ನಾಟಕ ರಂಗದ ಮೇಲೆ ಮೊದಲ ಸ್ತ್ರೀ - ಗಂಗೂಬಾಯಿ ಗುಳೇದಗುಡ್ಡ 

ಮಹಿಳಾ ಮಂತ್ರಿ - ಗ್ರೇಸ್ ಠಕ್ಕರ್ 

ಸಾಹಿತ್ಯ ಸಮ್ಮೇಳನದ ಮಹಿಳಾ ಅಧ್ಯಕ್ಷರು - ಜಯದೇವಿ ತಾಯಿ ಲಿಗಾಡೆ 

ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಕನ್ನಡಿತಿ - ಅನುಪಮಾ ನಿರಂಜನ

ನವೋದಯ ಕವಯಿತ್ರಿ - ಬೆಳಗೆರೆ ಜಾನಕಮ್ಮ


ಪತ್ರಿಕಾ ಲೋಕ

ಪತ್ರಿಕೆ - ಮಂಗಳೂರು ಸಮಾಚಾರ (೧೮೪೮)

ದಿನಪತ್ರಿಕೆ - ಸೂರ್ಯೋದಯ ಪ್ರಕಾಶಿಕ (೧೮೭೦)

ಕನ್ನಡ e-ಪತ್ರಿಕೆ - ವಿಶ್ವಕನ್ನಡ 

ವಾರ ಪತ್ರಿಕೆ - ಸುಬುದ್ಧಿ ಪ್ರಕಾಶ (೧೮೫೦)


ವಿಜ್ಞಾನ ಪತ್ರಿಕೆ - ವಿಜ್ಞಾನ

ವಿಡಿಯೋ ಪತ್ರಿಕೆ - ಬೆಳ್ಳಿಚುಕ್ಕಿ

ಮಕ್ಕಳ ಪತ್ರಿಕೆ - ಮಕ್ಕಳ ಪುಸ್ತಕ

ಮಹಿಳಾ ಪತ್ರಿಕೆ - ಕರ್ನಾಟಕ ನಂದಿನಿ (೧೯೧೩)

ಸಾಹಿತ್ಯಿಕ ವೈಜ್ಞಾನಿಕ ಪತ್ರಿಕೆ - ಕರ್ನಾಟಕ ಜ್ಞಾನ ಮಂಜರಿ (೧೮೭೮)

ಶಿಕ್ಷಣ ಪತ್ರಿಕೆ - ಕನ್ನಡ ಜ್ಞಾನ ಬೋಧಿನಿ (೧೮೬೨)

ಜಿಲ್ಲಾ ಪತ್ರಿಕೆ - ಜ್ಞಾನೋದಯ (ಶಿವಮೊಗ್ಗ)

ಕಾಮಶಾಸ್ತ್ರ ಪತ್ರಿಕೆ - ಪ್ರೇಮ

ಕಾನೂನು ಪತ್ರಿಕೆ - ನ್ಯಾಯ ಸಂಗ್ರಹ

ಚಲನಚಿತ್ರ ಪತ್ರಿಕೆ - ಸಿನಿಮಾ

ಹಾಸ್ಯ ಪತ್ರಿಕೆ - ವಿಕಟ ಪ್ರತಾಪ

ಅತಿ ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಪತ್ರಿಕೆ - ಉದಯವಾಣಿ 



ಸಾಹಿತ್ಯ ಲೋಕ  
ಕೃತಿ - ಕವಿರಾಜಮಾರ್ಗ

ಕಾವ್ಯ - ಆದಿಪುರಾಣ

ಗದ್ಯ - ವಡ್ಡಾರಾಧನೆ 

ನಾಟಕ - ಮಿತ್ರಾವಿಂದಾ ಗೋವಿಂದಾ

ಗೀತ ನಾಟಕ - ಮುಕ್ತದ್ವಾರ 

ಜ್ಯೋತಿಷ್ಯ ಗ್ರಂಥ - ಜಾತಕ ತಿಲಕ ( ಶ್ರೀಧರಾಚಾರ್ಯ )

ಸ್ವತಂತ್ರ ಪೌರಾಣಿಕ ನಾಟಕ - ಪೃಥು ವಿಜಯ

ಗಾದೆಗಳ ಸಂಕಲನ - ಕನ್ನಡ ಗಾದೆಗಳು

ಒಗಟುಗಳ ಸಂಗ್ರಹ - ಮಕ್ಕಳ ಒಡಪುಗಳು 

ಪ್ರಬಂಧ ಸಂಕಲನ - ಲೋಕರಹಸ್ಯ

ಛಂದಶಾಸ್ತ್ರ ಗ್ರಂಥ - ಛಂದೋಂಬುಧಿ

ವೈದ್ಯ ಗ್ರಂಥ - ಗೋವೈದ್ಯ ( ಕೀರ್ತಿವರ್ಮ ) 

ವಿಷಯ ವಿಶ್ವಕೋಶ - ವಿವೇಕ ಚಿಂತಾಮಣಿ

ವಿಶ್ವಕೋಶ - ಲೋಕೋಪಕಾರ

ಮಕ್ಕಳ ವಿಶ್ವಕೋಶ - ಬಾಲ ಪ್ರಪಂಚ 

ನವ್ಯತೆಯನ್ನೊಳಗೊಂಡ ಕಾದಂಬರಿ - ವಿಶ್ವಾಮಿತ್ರನ ಸೃಷ್ಟಿ (ಶ್ರೀರಂಗ) 

ಮನೋವೈಜ್ಞಾನಿಕ ಕಾದಂಬರಿ - ಅಂತರಂಗ ( ದೇವುಡು )

ವ್ಯಾಕರಣ ಗ್ರಂಥ - ಶಬ್ದಮಣಿ ದರ್ಪಣ

ಲಾಕ್ಷಣಿಕ ಗ್ರಂಥ - ಕವಿರಾಜ ಮಾರ್ಗ

ಬೈಬಲ್ ಕನ್ನಡೀಕರಣ - ಜಾನ್ ಹ್ಯಾಂಡ್ಸ್ 

ಐತಿಹಾಸಿಕ ನಾಟಕಕಾರ - ಸಂಸ

ಪ್ರವಾಸ ಕಥನ - ದಕ್ಷಿಣ ಭಾರತ ಯಾತ್ರೆ

ಪತ್ತೇದಾರಿ ಕಾದಂಬರಿ - ಚೋರಗ್ರಹಣ ತಂತ್ರ

ಆಯುರ್ವೇದ ಗ್ರಂಥ - ಕರ್ಣಾಟಕ ಕಲ್ಯಾಣಕಾರಕ

ಸ್ವತಂತ್ರ ಸಾಮಾಜಿಕ ಕಾದಂಬರಿ - ಇಂದಿರಾಬಾಯಿ

ಐತಿಹಾಸಿಕ ಕಾದಂಬರಿ - ಮುದ್ರಾಮಂಜೂಷ

ಜೀವನಚರಿತ್ರೆ - ಕುಣಿಗಲ್ ರಾಮಾಶಾಸ್ತ್ರಿಗಳ ಜೀವನ ಚರಿತ್ರೆ

ಅಭಿನಂದನಾ ಗ್ರಂಥ - ಸಂಭಾವನೆ ( ಬಿ.ಎಂ.ಶ್ರೀ.ಯವರಿಗೆ ) 

ಇಂಗ್ಲೀಷ್ - ಕನ್ನಡ ನಿಘಂಟುಕಾರ - ವಿಲಿಯಮ್ ರೀವ್ಸ್

ತಾಂತ್ರಿಕ ಪದಕೋಶ - ಔದ್ಯಮಿಕ ನಿಘಂಟು

ಕಾವ್ಯ ನಿಘಂಟು - ರನ್ನಕಂದ

ಗದ್ಯ ನಿಘಂಟು - ಕರ್ಣಾಟಕ ಶಬ್ದಸಾರ

ವೈದ್ಯಕೀಯ ನಿಘಂಟು - ವೈದ್ಯ ಪದಕೋಶ


ಬಣ್ಣದ ಲೋಕ

ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ - ಬೇಡರ ಕಣ್ಣಪ್ಪ

ಐತಿಹಾಸಿಕ ಚಿತ್ರ - ರಣಧೀರ ಕಂಠೀರವ

ಮೂಕಿ ಚಿತ್ರ - ಮೃಚ್ಛಕಟಿಕ

ವರ್ಣ ಚಲನಚಿತ್ರ - ಅಮರಶಿಲ್ಪಿ ಜಕಣಾಚಾರಿ

ಚಿತ್ರಮಂದಿರ - ಪ್ಯಾರಾಮೌಂಟ್ ( ೧೯೦೫ ) 

ಕಾದಂಬರಿ ಆಧಾರಿತ ಚಲನಚಿತ್ರ - ಕರುಣೆಯೇ ಕುಟುಂಬದ ಕಣ್ಣು

ರಿಯಾಯಿತಿ (ಸಬ್ಸಿಡಿ ) ಪಡೆದ ಚಿತ್ರ - ನಕ್ಕರೆ ಅದೇ ಸ್ವರ್ಗ 

ಸಾಮಾಜಿಕ ಚಲನಚಿತ್ರ - ಸಂಸಾರ ನೌಕೆ (೧೯೩೬) 

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ

ಚಿತ್ರ ಸಂಗೀತಕ್ಕೆ ೨ ಬಾರಿ ರಾಷ್ಟ್ರ ಪ್ರಶಸ್ತಿ - ಬಿ.ವಿ.ಕಾರಂತ್

ಭಾವಗೀತೆ ಧ್ವನಿಸುರುಳಿ - ನಿತ್ಯೋತ್ಸವ

ವೃತ್ತಿನಾಟಕ ಕಂಪೆನಿ - ಶ್ರೀ ವೀರನಾರಾಯಣ ಪ್ರಾಸಾದಿತ ಕೃತಪುರ ನಾಟಕ ಮಂಡಳಿ

ಬೀದಿ ನಾಟಕ ಪ್ರಯೋಗ -  ಕಟ್ಟು

ಹವ್ಯಾಸಿ ನಾಟಕ ತಂಡ - ಭಾರತ ಕಲೋತ್ತೇಜಕ ಸಂಗೀತ ಸಮಾಜ

ರೇಡಿಯೋ ನಾಟಕ - ನೀರಗಂಟಿ ಮಾರ ( ವಿ.ಕೆ.ಶ್ರೀನಿವಾಸನ್ )

ಪ್ರದರ್ಶನಗೊಂಡ ಅಸಂಗತ ನಾಟಕ - ಬೊಕ್ಕತಲೆಯ ನರ್ತಕಿ ( ಸುಮತೀಂದ್ರ ನಾಡಿಗ್ )

ನಾಡಿನ ಮೊದಲುಗಳು
ರಾಜವಂಶ - ಕದಂಬ

ಕೆರೆ - ಚಂದ್ರವಳ್ಳಿ

ಶಿಲ್ಪ - ನಾಗಶಿಲ್ಪ

ಶಾಸನ - ಹಲ್ಮಿಡಿ

ಕೋಟೆ - ಬಾದಾಮಿ ಕೋಟೆ

ಜೈನ ದೇವಾಲಯ - ಪ್ರಣವೇಶ್ವರ ದೇವಾಲಯ, ತಾಳಗುಂದ

ಬೌದ್ಧ ವಿಹಾರ - ಬನವಾಸಿ

ಅತಿ ಪ್ರಾಚೀನ ಕಲ್ಲಿನ ನಿರ್ಮಿತ ಕಟ್ಟಡ - ಹಲಸಿಯ ಜೈನ ಬಸದಿ 

ವಿಶ್ವವಿದ್ಯಾಲಯ - ಮೈಸೂರು ವಿ.ವಿ.

ಕಾಲೇಜು - ಸೆಂಟ್ರಲ್ ಕಾಲೇಜು, ಬೆಂಗಳೂರು

ವೈದ್ಯಕೀಯ ಕಾಲೇಜು - ಮೈಸೂರು 

ಪಾಲಿಟೆಕ್ನಿಕ್ ಕಾಲೇಜು - ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ ಕಾಲೇಜು, ಬೆಂಗಳೂರು

Nov 1, 2011

ಶಿಖರಸೂರ್ಯ ಕಾದಂಬರಿಯ ವಿಮರ್ಶೆ

  ಜ್ಞಾನಪೀಠ ಪ್ರಶಸ್ತಿ ವಿಜೇತ ಕಂಬಾರರ ಈ ಕಾದಂಬರಿಯನ್ನು ನಾನು ಎಂ.ಫಿಲ್ ಪದವಿಯಲ್ಲಿ ಅಧ್ಯಯನ ವಿಷಯವಾಗಿ ತೆಗೆದು ಕೊಂಡಿದ್ದೆ. ಇಲ್ಲಿ ಈ ಕಾದಂಬರಿಯ ಓದಿನ ಸಾರಾಂಶವನ್ನು ತಿಳಿಸಲು ಪ್ರಯತ್ನಿಸುತ್ತೇನೆ.

    'ಶಿಖರಸೂರ್ಯ' ಕಾದಂಬರಿಯು ಜನಪದ ಕತೆಯನ್ನು ಆಧರಿಸಿ ರಚಿತವಾಗಿದೆ. ಚಂದ್ರಶೇಖರ ಕಂಬಾರರ ಐದನೆಯ ಹಾಗೂ ಇಲ್ಲಿವರೆಗಿನ ಕೊನೆಯ ಕಾದಂಬರಿ 'ಶಿಖರಸೂರ್ಯ'. ಈ ಕಾದಂಬರಿಯು 2006 ರಲ್ಲಿ  ಪ್ರಕಟಗೊಂಡಿತು. ಜಾನಪದ ಮೈಯ್ಯಿಗೆ ಆಧುನಿಕ ಸಂವೇದನೆಯನ್ನು ಕಸಿ ಮಾಡಿದ ನಮ್ಮ ಅದ್ವೀತಿಯ ಕವಿಯಾದ ಕಂಬಾರರ 'ಶಿಖರ ಸೂರ್ಯ' ಕಾದಂಬರಿ ಮಹಾಕಾವ್ಯ ಸ್ವರೂಪದ ಒಂದು ವಿಶಿಷ್ಟ ಕೃತಿ. ಇದು ಒಂದು ರೀತಿಯಲ್ಲಿ ಅವರ 'ಚಕೋರಿ' ಮಹಾಕಾವ್ಯದ ಮುಂದುವರಿದ ಭಾಗವಾಗಿದೆ. ಈ ಕೃತಿಯು 2010ರಲ್ಲಿ ಭಾರತದ ಪ್ರತಿಷ್ಠಿತ ಪ್ರಶಸ್ತಿಯಾದ 2009ರ ಠಾಕೂರ್ ಸಾಹಿತ್ಯ ಪ್ರಶಸ್ತಿಯನ್ನು ಗಳಿಸಿರುವುದು ಈ ಕಾದಂಬರಿಯ ಶ್ರೇಷ್ಠತೆಯನ್ನು ಗುರುತಿಸುತ್ತದೆ. ಈ ಕಾದಂಬರಿಯು ಅತ್ಯಂತ ರೋಮಾಂಚನಕಾರಿಯಾಗಿ ಹಲವು ತಿರುವುಗಳನ್ನು ಪಡೆಯುತ್ತ ಓದುಗರಿಗೆ ಹೊಸ ಲೋಕವೊಂದನ್ನು ತೋರಿಸುತ್ತ, ಕ್ಷಣ ಕ್ಷಣಕ್ಕೂ ವಿಸ್ಮಯವನ್ನು ಮೂಡಿಸುವ ಅದ್ಭುತವಾದ ಕಲಾಕೃತಿಯಾಗಿದೆ.
    ಕಾದಂಬರಿಯ ಕಥಾ ಸಾರಾಂಶವನ್ನು ನೋಡುವುದಾದರೆ ಈ ಕಾದಂಬರಿಯ ನಾಯಕ ಶಿಖರ ಸೂರ್ಯ. ಇವನ ಸುತ್ತ ಕಾದಂಬರಿ ರೂಪು ಪಡೆದಿದೆ. ಶಿಖರಸೂರ್ಯ ಮೊದಲು ಚಿನ್ನಮುತ್ತನಾಗಿದ್ದಾಗ(ಅವನ ಮೊದಲ ಹೆಸರು) ಕಲಾವಿದನಾಗಲು ಪ್ರಯತ್ನಿಸಿ ಅದರಲ್ಲಿ ವಿಫಲಗೊಂಡು, ನಂತರದಲ್ಲಿ ಹೇಗಾದರೂ ಮಾಡಿ ಅದನ್ನು ಸಾಧಿಸಬೇಕೆಂಬ ಹಟದಿಂದ ವಾಮಮಾರ್ಗಗಳನ್ನು ಅನುಸರಿಸುತ್ತಾನೆ, ಅದರಲ್ಲೂ ಸಾಧ್ಯವಾಗದೇ ತನ್ನ ಗುರುಗಳ ಶಾಪಕ್ಕೆ ಗುರಿಯಾಗಿ ಅಲ್ಲಿಂದ ತಪ್ಪಿಸಿ ಕೊಳ್ಳಲು ಆತ್ಮಹತ್ಯೆಗೆ ಪ್ರಯತ್ನಿಸುತ್ತಾನೆ.

    ಚಿನ್ನಮುತ್ತನ ಆತ್ಮಹತ್ಯೆಯ ಪ್ರಯತ್ನವು ವಿಫಲವಾಗಿ ಕಾಡಿನ ದೊಡ್ಡ ಕಂದಕಕ್ಕೆ ಬೀಳುತ್ತಾನೆ. ಅಲ್ಲಿಂದ ಆತನನ್ನು ಜಟ್ಟಿಗ ಎಂಬುವನು ಅಲ್ಲಿಂದ ಶಿವಾಪುರಕ್ಕೆ ಕರೆತಂದು ಉಪಚರಿಸುತ್ತಾನೆ. ಶಿವಾಪುರದ ಶಿವಪಾದನ ಮಾತಿನಂತೆ ಜಟ್ಟಿಗ ಮತ್ತು ಆತನ ಮಡದಿ ಬೆಳ್ಳಿಯರಯ ಔಷದೋಪಾಚಾರಗಳಿಂದ ಆತನನ್ನು ಗುಣಪಡಿಸುತ್ತಾರೆ. ನಂತರ ಆತನನ್ನು ಶಿವಾಪುರದ ಅಮ್ಮನ ಬೆಟ್ಟದಲ್ಲಿರುವ ಶಿವಪಾದನ ಬಳಿಗೆ ಕರೆತರುತ್ತಾರೆ. ಇಲ್ಲಿ ಚಿನ್ನಮುತ್ತನಾಗಿದ್ದವನು ಜಯಸೂರ್ಯನ್ನಾಗಿ ಪರಿಚಯಿಸಿಕೊಳ್ಳುತ್ತಾನೆ. ಅಲ್ಲಿನ ವಿಶಿಷ್ಟವಾದ ವಿದ್ಯೆಗಳನ್ನು ಶಿವಪಾದನಿಂದ ಕಲಿಯಬೇಕೆಂಬ ಆಸೆಯಿಂದ, ಬಹುಪ್ರಮುಖ ವೈದ್ಯ ವಿದ್ಯೆಯಾದ ಸಸ್ಯ ಹೃದಯ ವಿದ್ಯೆಯನ್ನು ಕಲಿಯಬೇಕೆಂದು ಶಿವಪಾದನ ಶಿಷ್ಯನಾಗಿ ಸೇರಿಕೊಳ್ಳುತ್ತಾನೆ. ಸಸ್ಯ ವಿದ್ಯೆ ಕಲಿತು, ಅಲ್ಲಿಯೇ ರಹಸ್ಯೆವಾಗಿ ವಜ್ರದೇಹಿ ವಿದ್ಯೆಯನ್ನು ಕಲಿತು ವಜ್ರದೇಹಿಯಾಗಿ ಮಾರ್ಪಟ್ಟು ಶಿವಪಾದನ ನಿಂದನೆಗೆ ಒಳಗಾಗೊ ಅಲ್ಲಿಂದ ಹೊರಹಾಕಲ್ಪಡುತ್ತಾನೆ. ಆಗ ತನಗೆ ಉಪಚರಿಸಿ ಮರುಜೀವವನ್ನು ನೀಡಿದ ಬೆಳ್ಳಿಯ ಮೇಲಿನ ವ್ಯಾಮೋಹದಿಂದ ಅವಳ ಗಂಡ ಜಟ್ಟಿಗನನ್ನು ಕೊಲೆ ಮಾಡಿ ಅವಳನ್ನು ತನ್ನವಳಾಗಿ ಮಾಡಿಕೊಳ್ಳಲು ಪ್ರಯತ್ನಿಸಿ ವಿಫಲಗೊಂಡು ಊರಿನ ಜನರಿಂದ ಛೀಮಾರಿ ಹಾಕಿಸಿಕೊಂಡು ಅಲ್ಲಿಂದ ತಪ್ಪಿಸಿಕೊಂಡು ಕನಕಪುರಿ ನಗರಕ್ಕೆ ಸೇರುತ್ತಾನೆ.

   ಕನಕಪುರಿಯಲ್ಲಿ ತಾನು ವೈದ್ಯೆನೆಂದು ಪರಿಚಿತನಾಗುವ ಜಯಸೂರ್ಯ. ಇಲ್ಲಿ ಶಿಖರಸೂರ್ಯನಾಗಿ ಬದಲಾಗುತ್ತಾನೆ. ಕನಕಪುರಿಗೆ ಬಂದ ಮೊದಲು ಮಾಡಿದ ಕೆಲಸವೆಂದರೆ ಬಹಳ ದಿನಗಳಿಂದ ರೋಗದಿಂದ ನರಳುತ್ತಿದ್ದ ಕನಕಪುರಿಯ ರಾಜನನ್ನು ಒಂದೇ ದಿನದಲ್ಲಿ ಗುಣಪಡಿಸಿ ಬಹುಬೇಗನೆ ಕನಕಪುರಿಯ ಜನರ ಮನಸ್ಸನ್ನು ತನ್ನತ್ತ ಸೆಳೆಯುತ್ತಾನೆ. ನಂತರ ಕನಕಪುರಿಯ ರಾಜ್ಯವೈದ್ಯನಾಗಿ ನಿಯೋಜನೆಗೊಂಡು ಅರಮನೆಯಲ್ಲುರುವವರ ದೌರ್ಬಲ್ಯಗಳನ್ನು ಬಳಸಿಕೊಂಡು ಕನಕಪುರಿಯ ರಾಜನ ಮಗಳು ಛಾಯಾದೇವಿಯನ್ನು ವಿವಾಹವಾಗುತ್ತಾನೆ. ನಂತರ ಕನಕಪುರಿಯ ಅಧಿಕಾರವನ್ನು ಪಡೆಯಬೇಕೆಂಬ ಹಂಬಲದಿಂದ ಚಂಡೀದಾಸ ಎಂಬುವವನ ಸಹಾಯದಿಂದ ನಾಗಾರ್ಜುನನೆಂಬ ಮುನಿಯ ಬಳಿ ಧಾನ್ಯದಿಂದ ಚಿನ್ನ, ಮೇವಿನಿಂದ ಸೈನಿಕರನ್ನು ಸೃಷ್ಟಿಸುವ ರಸ ವಿದ್ಯೆಯನ್ನು ಕಲಿತು ನಂತರ ಬುಡಕಟ್ಟು ಜನಾಂಗದವರ ಸಹಾಯದಿಂದ ಕನಕಪುರಿಯನ್ನು ಆಕ್ರಮಿಸಿಕೊಳ್ಳುತ್ತಾನೆ. ಆಗ ಇವನ ಸಂಚಿಗೆ ಮಹಾರಾಣಿ, ರಾಜ, ಪ್ರದಾನಿ ಅರ್ಥಪಾಲ, ಸೇನಾಧಿಕಾರಿ ಬದೆಗ ಮುಂತಾದವರು ಬಲಿಪಶುಗಳಾಗುತ್ತಾರೆ. ಇವನ ಆಡಳಿತ ಬಂದ ನಂತರ ಕನಕಪುರಿಯ ಜನ ಮೊದಲು ಚಿನ್ನದ ಆಸೆಯಿಂದ ತಮ್ಮ ಧಾನ್ಯವೆನ್ನೆಲ್ಲಾ ಶಿಖರಸೂರ್ಯನಿಗೆ ಮಾರಿಕೊಂಡು ನಂತರದಲ್ಲಿ ತಮಗೆ ತಿನ್ನಲು ಧಾನ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ.

   ಕೊನೆಗೆ ಕನಕಪುರಿಗೆ ದೊಡ್ಡ ರೋಗ ಬಂದು ಅವನತಿಯನ್ನು ಹೊಂದುವ ಸ್ಥಿತಿಯನ್ನು ತಲುಪುತ್ತದೆ. ಇದನ್ನು ಶಿಖರಶೂರ್ಯ ತಾನು ವ್ಯೆದ್ಯನಾದರೂ ನಿರ್ಲಕ್ಷಿಸುತ್ತಾನೆ. ನಾಗಾರ್ಜುನನ ಮಾತಿನಂತೆ ಶಿವಾಪುರದಲ್ಲಿನ ಚಿನ್ನದ ಬೆಟ್ಟವನ್ನು ಪಡೆಯಬೇಕೆಂಬ ಆಸೆಯಿಂದ ಶಿವಾಪುರಕ್ಕೆ ದಾಳಿಯಿಡುತ್ತಾನೆ. ನಿನ್ನಡಿ ಎಂಬ ಶಿವಪಾದನ ತಿರುಮಂತ್ರದಿಂದ ತನ್ನ ದುರ್ವಿದ್ಯೆಯ ಫಲದಿಂದ ನಿರ್ಮಾಣವಾಗಿದ್ದ ಸ್ಯನಿಕರು, ಚಿನ್ನವೆಲ್ಲಾ ಮೂಲ ಸ್ಥಿತಿಗೆ ಬರುತ್ತದೆ. ನಂತರ ನಿನ್ನಡಿಯಿಂದ ಪರಾಭವಗೊಂಡು ಮತ್ತೆ ಕನಕಪುರಿಗೆ ಮರಳುತ್ತಾನೆ. ಮಹಾರೋಗದಿಂದ ತತ್ತರಿಸಿದ ಜನರ ದಂಗೆಯಿಂದ ತಪ್ಪಿಸಿಕೊಳ್ಳಲಾಗದೇ ಅಲ್ಲಿಂದ ತಪ್ಪಿಸಿಕೊಂಡು ದುರಂತ ಹೊಂದುತ್ತಾನೆ.

    ಹೀಗೆ ಕಾದಂಬರಿ ಮಾನವನ ಅತಿಯಾದ ದುರಾಸೆ, ಸ್ವಾರ್ಥಗಳಿಂದ ಹಲವು ತಿರುವುಗಳನ್ನು ಪಡೆಯುತ್ತಾ ಕೊನೆಗೆ ದುರಂತ ಹೊಂದುವುದನ್ನು ಈ ಕಾದಂಬರಿ ತಿಳಿಸುತ್ತದೆ. ವಾಮಾಚಾರ ವಿದ್ಯೆಯ ಅಹಂಕಾರದಿಂದಾಗಿ ದಾರುಣ ದುರಂತವಾಗುವುದೇ ಈ ಕಾದಂಬರಿಯ ತಿರುಳಾಗಿದೆ.

ನನ್ನೂರು - ಮಾಕಳಿ



ಚನ್ನಪಟ್ಟಣದಿಂದ ಉತ್ತರಕ್ಕೆ ೧೫ ಕಿಲೋ ಮೀಟರ್ ದೂರವಿರುವ ಮಾಕಳಿಗ್ರಾಮ. ಸುಮಾರು ೩೫೦೦ ರಿಂದ ೪೦೦೦ ಜನಸಂಖ್ಯೆಯನ್ನು ಹೊಂದಿರುವ ಈ ಗ್ರಾಮ. ಸುಮಾರು ಹನ್ನೆರಡು ಸಾವಿರ ಎಕರೆಯ ಸುಂದರವಾದ ಹಸಿರಿನ ಅರಣ್ಯದ ನಡುವೆ ಇರುವಮಾಕಳಿಗ್ರಾಮ. ರಾಜ ಮಹಾರಾಜರ ಕಾಲದ ಇತಿಹಾಸದ ಪುಟಗಳನ್ನೇ ತೆರೆದಿಡಲು ಇಲ್ಲಿ ಐವತ್ತಕ್ಕು ಹೆಚ್ಚಿನದಾಗಿ ದೊರೆಯುವ ವೀರಗಲ್ಲುಗಳು, ಮಾಸ್ತಿಗಲ್ಲುಗಳು ಒಂದು ಪುಟ್ಟ ಇತಿಹಾಸವನ್ನೇ ತೆರೆದಿಡುತ್ತವೆ ಆದರೆ ಇವುಗಳ ಬಗ್ಗೆ ಅಧ್ಯಯನ ನಡೆಸುವ ಅಗತ್ಯತೆ ಅವಶ್ಯಕ ವಾಗಿದೆ ಹಾಗೂ ಇಲ್ಲಿ ದೊರೆಯುವ ಶಾಸನದಿಂದ ಈ ಪ್ರದೇಶವನ್ನು ವಿಜಯನಗರದ ಅರಸು ದೇವರಾಯನ ಕಾಲದಲ್ಲಿ ಗೋಪಿನಾಯಕ ಎಂಬುವವನು ಆಳ್ವಿಕೆ ಮಾಡುತ್ತಿದ್ದುದಾಗಿ ತಿಳಿದುಬರುತ್ತದೆ. ಊರಿನ ಪಕ್ಕದಲ್ಲಿ ರಾಮಚಂದ್ರ ಕಲ್ಲು ಎಂಬ ಪ್ರದೇಶದಲ್ಲಿ ಈ ಹಿಂದೆ ಕೋಟೆ ಇತ್ತು ಎಂಬುದಕ್ಕೆ ಮೂಕ ಸಾಕ್ಷಿಯಾಗಿ ನಿಂತ ಬೆಟ್ಟದ ಮೇಲಿನ ಕಲ್ಲುಗಳನ್ನು ಕಾಣಬಹುದು. ವೀರಗಲ್ಲುಗಳಿಗಿಂತ ಹೆಚ್ಚಿನದಾಗಿ ಮಾಸ್ತಿಗಲ್ಲುಗಳು ದೊರೆಯುವುದರಿಂದ ಈ ಊರಿನಲ್ಲಿ ಸತಿಸಹಗಮನ ಪದ್ದತಿ ಅಸ್ತಿತ್ವದಲ್ಲಿತ್ತು ಎಂಬುದನ್ನು ತಿಳಿಯಬಹುದಾಗಿದೆ.
  • ಮಾಕಳಿಯ ಗೋಪಾಲಕೃಷ್ಣ ದೇವಾಲಯವು ಇಲ್ಲಿನ ಶಾಸನದ ಪ್ರಕಾರ ಹೊಯ್ಸಳರ ಕಾಲದಲ್ಲಿ ನಿರ್ಮಿಸಲ್ಪಟ್ಟಿದೆಂದು ತಿಳಿಯುತ್ತದೆ. ಈ ದೇವಾಲಯದಲ್ಲಿ ಸುಂದರವಾದ ಕೃಷ್ಣನ ವಿಗ್ರಹವನ್ನು ಹೊಂದಿದೆ. ದೇವಾಲಯವು ಈಗ ಜೀರ್ಣೋದ್ದಾರದಿಂದಾಗಿ ಕಾಂಕ್ರೀಟ್ ಗೋಡೆಯನ್ನು ಪಡೆದಿದ್ದು ತನ್ನ ಹಳೆಯ ಸೊಬಗನ್ನು ಕಳೆದುಕೊಂಡಿದೆ.
  • ಮಾಕಳಿಯು ಗ್ರಾಮ ಪಂಚಾಯಿತಿಯನ್ನು ಹೊಂದಿದೆ. ಮಾಕಳಿ ಗ್ರಾಮಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಪ್ರದೇಶವೆಂದರೆ ಮಾಕಳಿಹೊಸಹಳ್ಳಿ, ಕೋಟೆಹೋಲ(ರಾಮರಾಜಪುರ), ನಾಯಿದೊಳ್ಳೆ, ಪ್ಲಾಂಟೆಷನ ದೊಡ್ಡಿ, ರಾಮನರಸಿಂಹರಾಜಪುರ ಗ್ರಾಮಗಳನ್ನು ಒಳಗೊಂಡಿದೆ. ಮಾಕಳಿಯ ಪ್ರಖ್ಯಾತ ದೇವಸ್ಥಾನಗಳೆಂದರೆ ಶ್ರೀ ಹಿರಿಯಮ್ಮ ದೇವಸ್ಥಾನ, ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಶ್ರೀ ಬಲ್ಲೆಲಿಂಗೇಶ್ವರ ದೇವಸ್ಥಾನ, ಶ್ರೀ ತಿಮ್ಮಪ್ಪ ದೇವಸ್ಥಾನ, ಶ್ರೀ ವೆಂಕಟೇಶ್ವರ ದೇವಸ್ಥಾನ ಮುಂತಾದವು. ಮಾಕಳಿ ಎಂದೊಡನೆಮಾಕಳಿ ಬೇರು ಪ್ರಸಿದ್ಧ ಮಾಕಳಿ ಬೇರಿನ ಉಪ್ಪಿನಕಾಯಿ ತುಂಬ ವಿಶಿಷ್ಟ. ಮಾಕಳಿಯಲ್ಲಿ ಒಂದನೆ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಶಾಲಾ-ಕಾಲೇಜು ಸುತ್ತ ಮುತ್ತಲಿನ ಗ್ರಾಮಗಳ ಮಕ್ಕಳಿಗೆ ವ್ಯಾಸಂಗ ಮಾಡಲು ಅನುಕೂಲವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಒಟ್ಟಿನಲ್ಲಿ ಉತ್ತಮವಾದ ವಾತವಾರಣದಿಂದ ಕೂಡಿದ ಗ್ರಾಮ ಇದಾಗಿದೆ. ಇಲ್ಲಿನ ಜನರ ಪ್ರಮುಖ ಕಸುಬು ವ್ಯವಸಾಯ. ಪ್ರಮುಖವಾದ ಬೆಳೆಗಳೆಂದರೆ ರಾಗಿ, ಭತ್ತ, ಮಾವು, ತರಕಾರಿ ಬೆಳೆಗಳು ಇತ್ಯಾದಿ. ವ್ಯವಸಾಯದ ಜೊತೆಗೆಹೈನುಗಾರಿಕೆ, ಕುರಿ ಸಾಕಣೆ, ರೇಷ್ಮೆ ಸಾಕಣೆ ಮುಂತಾದ ಈ ಜನರ ಮುಖ್ಯ ಆಧಾಯದ ಮೂಲಗಳಾಗಿವೆ.

  • ಮಾಕಳಿಯ ಮತ್ತೊಂದು ವಿಶಿಷ್ಟತೆಯೆಂದರೆ ಪ್ರತಿವರ್ಷವು ನಡೆಯುವ ಹಿರಿಯಮ್ಮ ಗ್ರಾಮ ದೇವತೆಯ ಹಬ್ಬವು ಬಹು ವಿಜೃಭಣೆಯಿಂದ ಜರಗುತ್ತದೆ. ಈ ಹಬ್ಬವು ಒಂದು ವಾರಗಳ ಕಾಲ ನಡೆಯುತ್ತದೆ.ಸುತ್ತ ಮುತ್ತಲ ಗ್ರಾಮದವರಿಗೂ ಒಂದು ಸಡಗರದ ದಿನವಾಗಿರುತ್ತದೆ. ಈ ಸಂದರ್ಭದಲ್ಲಿ ನಡೆಯುವ ದೇವರ ಉತ್ಸವ, ಕೋಲಾಟ, ಕೊಂಡ(ಬೆಂಕಿಯ ಕೆಂಡದ ಮೇಲೆ ನಡೆಯುವುದು), ನೀರ್ಗಾಲಿ, ಡೊಳ್ಳು ಕುಣಿತ ಮುತಾಂದ ಕಾರ್ಯಕ್ರಮಗಳು ಜನರ ಮನ ಸೆಳೆಯುತ್ತವೆ.
  • ಮಾಕಳಿ ಎಂಬ ಹೆಸರು ಮತ್ತೊಂದರ ಪ್ರಕಾರ ಮಾಕಳಿ ರಾಜ್ಯ ಅರಣ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉಪ್ಪಿನ ಕಾಯಿಗೆ ಬಳಸುವ "ಮಾಗಣಿ ಬೇರು" ದೊರೆಯುತ್ತಿದ್ದರಿಂದ ಮಾಗಣಿ ಊರು ತದನಂತರದಲ್ಲಿ "ಮಾಕಳಿ"ಯಾಗಿರಬೇಕು. ಇನ್ನೊಂದು ಐತಿಹ್ಯದ ಪ್ರಕಾರ ಈ ಊರಿನಲ್ಲಿ ನೂರಾರು ವರ್ಷಗಳ ಹಿಂದೆ ಮಹಾಕಾಳಿ ದೇವಾಲಯವಿತ್ತೆಂದು ಅದರಿಂದ ಮಹಾಕಾಳಿ ಊರೆಂದು ನಂತರದಲ್ಲಿ ಮಾಕಳಿಯಾಯಿತ್ತೆಂದು ತಿಳಿಯುತ್ತದೆ. ಆದರೆ ಈಗ ಮಹಾಕಾಳಿ ದೇವಾಲಯ ನಶಿಸಿಹೋಗಿ ಈಗಿನ ಹಿರಿಯಮ್ಮ ದೇವಾಲಯವೇ ಹಿಂದೆ ಮಹಾಕಾಳಿ ದೇವಾಲಯವಾಗಿರಬೇಕು ಎನಿಸುತ್ತದೆ.
ಮಾಕಳಿ ಶಾಸನ : -
ಮಾಕಳಿ ಗ್ರಾಮದಿಂದ ಉತ್ತರಕ್ಕೆ ಸಿಗುವ ಈ ಶಾಸನದ ಕಾಲ ಕ್ರಿ.ಶ.೧೪೧೪. ಇದನ್ನು ಬಿ.ಎಲ್.ರೈಸ್ ರವರು ತಮ್ಮ ಎಫಿಗ್ರಾಫಿಯಾ ಆಫ್ ಕರ್ನಾಟಕದ ೯ನೇ ಸಂಪುಟದಲ್ಲಿ ಪ್ರಕಟಿಸಿದ್ದಾರೆ. ಇದೊಂದು ದಾನ ಶಾಸನವಾಗಿದೆ. ವಿಜಯನಗರದ ಅರಸು ದೇವರಾಯನ ಕಾಲದಲ್ಲಿ ಈ ಸೀಮೆಯನ್ನು ಗೋಪಿನಾಯಕ ಎಂಬುವವನು ಆಳ್ವಿಕೆ ಮಾಡುತ್ತಿರುವಾಗ ಕೇತುಗೌಡ ಎಂಬುವವನು ಈ ಪ್ರದೇಶದಲ್ಲಿ ಹೊಸದಾದ ಹಳ್ಳಿಯನ್ನು ಹಾಗೂ ಕೆರೆಯನ್ನು ಕಟ್ಟಿಸಿ ದತ್ತಿ ಬಿಟ್ಟ ವಿಚಾರ ಈ ಶಾಸನದಿಂದ ತಿಳಿದುಬರುತ್ತದೆ. ಈ ಶಿಲಾಶಾಸನದ ಭಾಷೆ ಹಾಗೂ ಲಿಪಿ ಕನ್ನಡದಲ್ಲಿದ್ದು, ೨೫ ಸಾಲುಗಳಿಂದ ಕೂಡಿದೆ.

ನಮ್ಮ ಕನ್ನಡ ನಾಡು - ನನ್ನ ಕವನ

ಕನ್ನಡ ನಾಡಿನ ಅಂದವ ನೋಡ
ಸಾಹಿತ್ಯ ಸಂಸ್ಕೃತಿಯ ಕಲೆ ಬೀಡ
ಮನ ತಣಿಸುವ ಹಚ್ಚ ಹಸಿರು
ಮಲೆನಾಡಿನ ಸೌಂದರ್ಯದುಸಿರು

ಜೋಗಿನ ಜಲಪಾತದ ಸೊಬಗಿನ ಇಂಪು
ಪಂಚ ಕೋಟಿ ಜನರಾಡುವ ಕನ್ನಡದ ಕಂಪು
ಬೇಲೂರು ಹಳೇಬೀಡು ಮೈಸೂರು
ಸದಾ ಆಕರ್ಷಿಸಿಸುವ ತವರೂರು

ಸುಂದರ ಇತಿಹಾಸ ಸೃಷ್ಟಿಸಿದ ನಾಡು
ಕಲೆ ವಾಸ್ತುಶಿಲ್ಪ ಸಾಹಿತ್ಯದ ಬೀಡು
ವಿದೇಶಿಯರು ಹೊಗಳುವ ಮೈಸೂರು ದಸರ
ನಾಡಿನ ಜನತೆಯ ಸಂತಸದ ಸಡಗರ

ನಾಡನ್ನು ಕಟ್ಟಿದ ರಾಜರ ವೈಭವ
ಕವಿಗಳು ರಚಿಸಿದ ಸಾಹಿತ್ಯ ಭಂಡಾರ
ಪ್ರವಾಸಿಗರ ಕೈ ಬೀಸಿ ಕರೆಯುವ ತಾಣ
ನೆಲೆಯೂರಲು ಯೋಗ್ಯವಾದ ವಾಸಸ್ಥಾನ

ನೀ ಒಮ್ಮೆ ಬಂದು ನೋಡು ಬಾರ
ಕನ್ನಡನಾಡಿನ ಅಂದವ ಸವಿಯಬಾರ
-ಮಾಕೃಮ*

ಕರ್ನಾಟಕ ಜಿಲ್ಲೆಗಳು

ನಮ್ಮ ಕರ್ನಾಟಕ ಜಿಲ್ಲೆಗಳು


೧ : ಬಾಗಲಕೋಟೆ
೨ : ಬೆಂಗಳೂರು ಗ್ರಾಮಾಂತರ
೩ : ಬೆಂಗಳೂರು ನಗರ
೪ : ಬೆಳಗಾವಿ
೫ : ಬಳ್ಳಾರಿ
೬ : ಬೀದರ್
೭ : ಬಿಜಾಪುರ
೮ : ಚಾಮರಾಜನಗರ
೯ : ಚಿಕ್ಕಮಗಳೂರು
೧೦ : ಚಿತ್ರದುರ್ಗ
೧೧ : ದಕ್ಷಿಣ ಕನ್ನಡ
೧೨ : ದಾವಣಗೆರೆ
೧೩ : ಧಾರವಾಢ
೧೪ : ಗದಗ್
೧೫ : ಗುಲ್ಬರ್ಗ
೧೬ : ಹಾಸನ
೧೭ : ಹಾವೇರಿ
೧೮ : ಕೊಡಗು
೧೯ : ಕೋಲಾರ
೨೦ : ಕೊಪ್ಪಲ
೨೧ : ಮಂಡ್ಯ
೨೨ : ಮೈಸೂರು
೨೩ : ರಾಯಚೂರು
೨೪ : ಶಿವಮೊಗ್ಗ
೨೫ : ತುಮಕೂರು
೨೬ : ಉಡುಪಿ
೨೭ : ಉತ್ತರ ಕನ್ನಡ
೨೮ : ಚಿಕ್ಕಬಳ್ಳಾಪುರ
೨೯ : ರಾಮನಗರ

೦ : ಯಾದಗಿರಿ



ಕನ್ನಡ ನಾಡಿನ ಜನ್ಮದಿನದ ಶುಭಾಶಯಗಳು


ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ಕನ್ನಡದ ಹಬ್ಬವು ನವೆಂಬರ್ ತಿಂಗಳಿಗೆ ಮಾತ್ರ ಸಿಮೀತವಾಗಿರದೇ ಸದಾ ಕಾಲ ಕನ್ನಡದ ಕಂಪು ತುಂಬಿರಲಿ ಎಂದು ಹಾರೈಸುತ್ತೇನೆ. ಕಸ್ತೂರಿ ಕನ್ನಡ ವಿಶ್ವ ಮಟ್ಟದಲ್ಲಿ ಬೆಳಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ 56ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.. ಜೈ ಕರ್ನಾಟಕ ಮಾತೆ................ ಜೈ ಕನ್ನಡ........




Sep 10, 2011

ಅನ್ನದಾತನ ಗೋಳು ಕೇಳೋರೇ ಇಲ್ಲಣ್ಣ

ನಮ್ಮ ಭಾರತ ಹಳ್ಳಿಗಳ ದೇಶ. ಹಳ್ಳಿಗಳ ಉದ್ಧಾರದಿಂದ ದೇಶದ ಪ್ರಗತಿ ಸಾದ್ಯ ಎಂದ ಗಾಂಧಿಯ ಮಾತುಗಳಿಗೆ ಬೆಲೆಯೇ ಇಲ್ಲದಾಗಿದೆ. ರಾಜಕಾರಣಿಗಳ ಸ್ವಾರ್ಥಕ್ಕೆ ರೈತರು ಭೂಮಿಯನ್ನು ಕಳೆದುಕೊಂಡು ನಿರ್ಗತಿಕರಾಗುತ್ತಿದ್ದಾರೆ. ಮಾತ್ರವಲ್ಲ ದೇಶಕ್ಕೆ ಅನ್ನ ನೀಡುವ ಜನ ಇಂದು ತುತ್ತು ಅನ್ನಕ್ಕೆ ಹೆಣಗಾಡುವ ಪರಿಸ್ಥಿತಿಯು ಉಂಟಾಗಿದೆ. ರಾಜಕಾರಣಿಗಳ ರಾಜಕೀಯ ದೊಂಬರಾಟಕ್ಕೆ ಬಲಿಯಾಗುತ್ತಿರುವುದು ಮಾತ್ರ ನಮ್ಮ ರೈತರೇ. ರೈತರು ವರ್ಷಾನುಗಟ್ಟಲೆ ಬಿಸಿಲು ಮಳೆಯೆನ್ನದೇ ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ಸಿಗದೇ ಕಂಗಲಾಗಿದ್ದಾರೆ. ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರಕ್ಕೆ ಬರುವ ಸರಕಾರಗಳು ಅಧಿಕಾರದ ಗದ್ದುಗೆ ಹಿಡಿದ ನಂತರ ಅವರನ್ನು ಮರೆಯುತ್ತಿದ್ದಾರೆ. ಇವರ ಈ ವರ್ತನೆಗೆ ಕಾರಣ ಬಹುಪಾಲು ರೈತರು ಅನಕ್ಷರಸ್ಥರಾಗಿರುವುದು. ಆದ್ದರಿಂದ ರೈತರ ಪರ ದನಿಯನ್ನು ವಿದ್ಯಾವಂತರು ಇಂತಹ ಬಂಡ ಸರಕಾರಗಳನ್ನು ಕೇಳಬೇಕಾಗಿದೆ.

Aug 8, 2011

ಕುವೆಂಪು - ವಿಶ್ವಮಾನವ ಸ೦ದೇಶ

ವಿಶ್ವಮಾನವ ಸ೦ದೇಶ

ಪ್ರತಿಯೊ೦ದು ಮಗುವೂ ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೆ ವಿದ್ಯೆಯ ಕರ್ತವ್ಯವಾಗಬೇಕು.

ಹುಟ್ಟುವಾಗ ‘ವಿಶ್ವಮಾನವ’ನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾ೦ಗ, ವರ್ಣ ಇತ್ಯಾದಿ ಉಪಾಧಿಗಳಿ೦ದ ಬದ್ದನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿ೦ದ ಪಾರಾಗಿ ಅವನನ್ನು ‘ಬುದ್ಧ’ನನ್ನಾಗಿ, ಅ೦ದರೆ ವಿಶ್ವಮಾನವನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸ೦ಸ್ಕೃತಿ, ನಾಗರೀಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪ೦ಚದ ಮಕ್ಕಳೆಲ್ಲ ‘ಅನಿಕೇತನ’ರಾಗಬೇಕು, ಲೋಕ ಉಳಿದು, ಬಾಳಿ ಬದುಕಬೇಕಾದರೆ! ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸ೦ಭವಿಸಿ ಹೋಗಿದ್ದಾರೆ. ಆವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊ೦ಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆ೦ಬ ಉದ್ದೇಶದಿ೦ದ ಹುಟ್ಟಿಕೊ೦ಡ ಮಹಾತ್ಮರ ವಾಣಿ ಮತವಾಗಿ ಮಾದಕವಾಯಿತು. ಒ೦ದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊ೦ದು ಹೊಸ ಧರ್ಮಕ್ಕೆ ಯೆಡೆಗೊಟ್ಟುದೂ ಉ೦ಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗು೦ಪುಗು೦ಪಾಗಿ ಒಡೆದಿವೆ. ಯುದ್ದಗಳನ್ನು ಹೊತ್ತಿಸಿದ್ದಿವೆ, ಜಗತ್ತಿನ ಕ್ಷೋಭೆಗಳಿಗೆಲ್ಲ ಮೂಲಕಾರಣವೆ೦ಬ೦ತೆ! ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನುಮೇಲೆ ಮತ ಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿ೦ದೆ ಹೇಳಿದ೦ತೆ ‘ಮತ ಮತ್ತು ರಾಜಕೀಯ ಕಾಲ ಆಗಿಹೋಯಿತು. ಇನ್ನೇನಿದ್ದರೂ ಆಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.’

ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ

ಈ ಪ೦ಚಮ೦ತ್ರ ಇನ್ನು ಮು೦ದಿನ ದೃಷ್ಟಿಯಾಗಬೇಕಾಗಿದೆ. ಅ೦ದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; ಮನುಜ ಮತ. ಆ ಪಥ ಈ ಪಥ ಅಲ್ಲ; ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮನ್ವಯಗೊಳ್ಳುವುದು. ಮಿತಮತದ ಆ೦ಶಿಕ ದೃಷ್ಟಿಯಿ೦ದ ಕಾಣುವ ಪೂರ್ಣದೃಷ್ಟಿ. ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅ೦ತಹ ಭಾವನೆ ಅ೦ತಹ ದೃಷ್ಟಿ ಬರಿಯ ಯಾವುದೋ ಒ೦ದು ಜಾತಿಗೆ, ಮತಕ್ಕೆ, ಗು೦ಪಿಗೆ, ಒ೦ದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗು೦ಪುಗಾರಿಕೆಗೆ೦ದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿಸ್ವಾತ೦ತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸ೦ಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾದಕವಾಗುವುದೂ ಸಾಧ್ಯ. ಈ ‘ದರ್ಶನ’ವನ್ನೆ ‘ವಿಶ್ವಮಾನವ ಗೀತೆ’ ಸಾರುತ್ತದೆ.

Jun 9, 2011

ಹಳೆಯ ಹಳ್ಳಿಯ ಲೆಕ್ಕಗಳು


ತೂಕ ಹಾಗೂ ಅಳತೆಗೆ ಸಂಬಂಧಿಸಿದಂತೆ

ಹಿಂದೆ ತೂಕವನ್ನು "ರೂಪಾಯಿ"ಗಳಿಂದಲೇ ಕಂಡುಕೊಂಡಿದ್ದು ನಮಗೆ ಕಂಡುಬರುತ್ತದೆ. ೨೪ ಬೆಳ್ಳಿ "ರೂಪಾಯಿ"ಗಳ ತೂಕವನ್ನು ಒಂದು "ಸೇರು" ಎಂದು ಮಾಡಿಕೊಂಡಿದ್ದರಿಂದ, ಅದರ ಅಳತೆಗೆ ತಕ್ಕಂತೆ " ಸೇರಿ"ನ ಸೃಷ್ಟಿಯಾಗಿರುವುದನ್ನು ನಾವು ಗಮನಿಸುತ್ತೇವೆ. ಹೀಗೆ "ಪಾವು", "ಚಟಾಕು", "ಗಜ", "ಅಂಗುಲ", "ಮೈಲಿ", "ಹರಿದಾರಿ" "ಎಕರೆ" ಮುಂತಾದ ಅಳತೆಮಾನಗಳು ಹಾಗೂ "ತೊಲ", "ಪಲ್ಲ", "ಖಂಡುಗ" ಮುಂತಾದ ತೂಕಮಾನಗಳು ಬಂದು ಸೇರಿಕೊಂಡಿವೆ. ಉದಾಹರಣೆಗೆ, ಒಂದು ಸೇರು ಎಂದರೆ, ೨೪ ಬೆಳ್ಳಿ "ರೂಪಾಯಿ"ಗಳ ತೂಕ ಅಥವಾ ನಾಲ್ಕು "ಪಾವು" ಎಂದೂ ಹಾಗೂ ಒಂದು "ಗಜ" ಎಂಬುದನ್ನು ಮೂರು "ಅಡಿ" ಎಂದು ಹೇಳಲಾಗುತ್ತದೆ. ಇವುಗಳ ಪ್ರಕಾರ ತೂಕ ಹಾಗು ಅಳತೆಗಳನ್ನು ನಾವು ಈ ರೀತಿ ವಿಂಗಡಿಸಬಹುದಾಗಿದೆ.
೧ ಬೆಳ್ಳಿ ರೂಪಯಿ ತೂಕ = ೧ ತೊಲ
೧ ಪಾವು = ೪ ಚಟಾಕು
೧ ಸೇರು = ೪ ಪಾವು ಅಥವ ೨೪ ಬೆಳ್ಳಿ ರೂಪಯಿಗಳ ತೂಕ
೧ ಇಬ್ಬಳಿಗೆ = ಐದೂವರೆ ಸೇರು (ದೊಡ್ದ ಇಬ್ಬಳಿಗೆಯಾದರೆ ೬ ಸೇರು)
೧ ಪಲ್ಲ = ೧೦೦ ಸೇರು
೧ ಕೊಳಗ = ೨ ಇಬ್ಬಳಿಗೆ ಅಥವ ೧೧ ಸೇರು
೧ ಖಂಡುಗ = ೪೦ ಇಬ್ಬಳಿಗೆ ಅಥವ ೨೦ ಕೊಳಗ

೧ ಅಡಿ = ೧೨ ಅಂಗುಲ ಅಥವ ಇಂಚು
೧ ಗಜ = ೩ ಅಡಿ ಅಥವ ೩೬ ಅಂಗುಲ
೧ ಗುಂಟೆ = ೨೨೦ ಚದರ ಗಜ
೧ ಎಕರೆ = ೪೦ ಗುಂಟೆ

೧ ಮೈಲಿ = ೮ ಫರ್ಲಾಂಗು
೧ ಹರಿದಾರಿ = ೪ ಮೈಲಿ
೧ ಗಾವುದ = ೧೨ ಹರಿದಾರಿ

ನಾನು ನೋಡಿದಂತೆ ಸಣ್ಣವನಾಗಿದ್ದಾಗ, ಅಪ್ಪ ಶಾಲಾ ಯೂನಿಫಾರಂ ಬಟ್ಟೆ ಹಾಕಲು ಅಂಗಡಿಗೆ ಕರೆದುಕೊಂಡು ಹೋಗುತ್ತಿದ್ದದ್ದು ಹಾಗೂ ಅಲ್ಲಿ ಬಟ್ಟೆಯನ್ನು ಗಜದಲ್ಲೇ ಅಳತೆ ಮಾಡುತ್ತಿದ್ದದ್ದು ನನಗೆ ನೆನಪಿದೆ. ಇನ್ನು ಭತ್ತದ ನಾಟಿಗೂ ಮೊದಲು ಪೈರಿನ ಹೊಟ್ಟಿಲಿಗೆ ಬಿತ್ತನೆ ಭತ್ತದ ಅಳತೆಯನ್ನು ಸೇರಿನಲ್ಲಿ ಈಗಲೂ ಅಳೆದು ಉಪಯೋಗಿಸುವುದು ಸಾಮಾನ್ಯವಾಗಿದೆ. ಹಳ್ಳಿಗಳಲ್ಲಿ ಒಂದು ಎಕರೆಗೆ ಸುಮಾರು ಮೂವತ್ತು ಸೇರು ಬಿತ್ತನೆ ಭತ್ತವನ್ನು ಉಪಯೋಗಿಸುತ್ತಾರೆ. ಇನ್ನು ತೂಕದಲ್ಲಿ ನೋಡಿದರೆ, ಬೆಣ್ಣೆ, ತುಪ್ಪ ಮುಂತಾದ ಖಾದ್ಯಗಳನ್ನು "ಸೇರು", "ಪಾವು" ಎಂದೇ ತೂಗುವುದು ವಾಡಿಕೆಯಾಗಿತ್ತು. ಅದಕ್ಕಾಗಿಯೇ ತೂಕದ ಕಲ್ಲುಗಳನ್ನು ಉಪಯೋಗಿಸುತ್ತಿದ್ದರು. ಉದಾಹರಣೆಗೆ,
ಅಚ್ಚೇರು ಬೆಣ್ಣೆ = ಅರ್ಧ ಸೇರು ಬೆಣ್ಣೆ = ೧೨ ಬೆಳ್ಳಿ ರೂಪಾಯಿಗಳ ತೂಕ ಅಥವ ೨ ಪಾವು
ಅರ್ಪಾವು ತುಪ್ಪ = ಅರ್ಧ ಪಾವು ತುಪ್ಪ

ಹಳ್ಳಿ ಅಳತೆಯಲ್ಲಿ ಕಾಣಬಹುದಾದ ಇನ್ನೊಂದು ವಿಷೇಶ ಎಂದರೆ, ಸೇರು, ಪಾವು, ಇಬ್ಬಳಿಗೆ, ಕೊಳಗ ಹೀಗೆ ಯಾವುದನ್ನೇ ಉಪಯೋಗಿಸಿ ಭತ್ತ, ರಾಗಿ ಅಥವಾ ಬೇರೆ ಯಾವುದೇ ಧಾನ್ಯಗಳನ್ನು ಅಳೆಯುವಾಗ "ಹೆಚ್ಚಲಿ" ಎಂಬ ಪದವನ್ನು ಸಾಮಾನ್ಯವಾಗಿ ಉಪಯೋಗಿಸುತ್ತಿರುತ್ತಿದ್ದರು. ಅದಕ್ಕೆ ಎರಡು ಕಾರಣಗಳಿವೆ. ಮೊದಲನೆಯದಾಗಿ ಧಾನ್ಯ ಹಾಗೇ ಹೆಚ್ಚಲಿ ಎಂಬುದು. ಎರಡನೆಯದಾಗಿ ೭, ೧೧ ಮತ್ತು ೧೭ ಸಂಖ್ಯೆಗಳು ಅಶುಭ ಹಾಗು ಅವುಗಳನ್ನು ಉಪಯೋಗಿಸಬಾರದೆಂಬ ನಂಬಿಕೆ. ಈ ಕಾರಣಗಳಿಂದ, "ಆರು" ಆದ ನಂತರ "ಹೆಚ್ಚಲಿ" ನಂತರ "ಎಂಟು" ಎಂದೂ, ಹತ್ತಾದ ನಂತರ "ಹೆಚ್ಚಲಿ" ನಂತರ "ಹನ್ನೆರಡು ಎಂದೂ, "ಹದಿನಾರು" ಆದ ನಂತರ "ಹೆಚ್ಚಲಿ" ನಂತರ "ಹದಿನೆಂಟು" ಎಂದೂ ಬಳಸುತ್ತಿದ್ದರು. ಹೀಗೆ ಏಳು, ಹನ್ನೊಂದು ಮತ್ತು ಹದಿನೇಳು ಸಂಖ್ಯೆಗಳನ್ನು ಉಪಯೋಗಿಸುತ್ತಿರಲಿಲ್ಲ. ಹಾಗೇ ಕೆಲವು ಸಂಖ್ಯೆಗಳನ್ನು ಶುಭ ಸಂಖ್ಯೆಗಳೆಂದು ನಂಬಿ ಉಪಯೋಗಿಸುತ್ತಿದ್ದದ್ದೂ ಉಂಟು. ಅವು ಯಾವುವೆಂದರೆ, ಐದು, ಒಂಬತ್ತು ಮತ್ತು ಹನ್ನೆರಡು.

ಹಣಕ್ಕೆ ಸಂಬಂಧಿಸಿದಂತೆ

ಈ ಮೊದಲೇ ಹೇಳಿದಂತೆ ಹಿಂದೆ "ಕಾಸು"ಗಳು ಬಹುಪಾಲು ಎಲ್ಲಾ ಅಳತೆಗಳಲ್ಲೂ ಪ್ರಧಾನ ಪಾತ್ರ ವಹಿಸುತ್ತಿದ್ದದ್ದು ನಮಗೆ ಕಾಣುತ್ತದೆ. ಮೂರು ಕಾಸಿನ ಒಂದು ಬಿಲ್ಲೆ, ಇಂಥ ನಾಲ್ಕು ಬಿಲ್ಲೆಗಳು ಸೇರಿದರೆ ಹನ್ನೆರಡು "ಕಾಸು" ಅಥವಾ ಒಂದು "ಆಣೆ"ಯಾಗುತ್ತದೆ. ಇಂದಿನ "ನಾಲ್ಕಾಣೆ", "ಎಂಟಾಣೆ", "ಹನ್ನೆರಡಾಣೆ", "ಹದಿನಾರಾಣೆ"ಗಳು ಈ ಹಿನ್ನಲೆಯಿಂದಲೇ ಬಂದಿರುವುದು ನಮಗೆ ತಿಳಿದ ಸಂಗತಿಯಾಗಿದೆ. ಈಗಲೂ ನಾವು ಈ "ಆಣೆ"ಗಳನ್ನು ಉಪಯೋಗಿಸುತ್ತೇವೆ. ಇದರ ಪ್ರಕಾರ ನಾವು ನಾಣ್ಯಗಳನ್ನು ಈ ಕೆಳಗೆ ಹೇಳಿರುವ ರೀತಿ ವಿಂಗಡಿಸಬಹುದಾಗಿದೆ.
ಚಲಾವಣೆಯಲ್ಲಿದ್ದ ನಾಣ್ಯಗಳು ಮತ್ತು ಉಪಯೋಗಿಸುತ್ತಿದ್ದ ಲೋಹಗಳು:
೧ ಕಾಸು (ತಾಮ್ರ)
೩ ಕಾಸು (ತಾಮ್ರ)
೬ ಕಾಸು (ನಿಕ್ಕಲ್)
೧ ಆಣೆ = ೧೨ ಕಾಸು (ನಿಕ್ಕಲ್)
೨ ಆಣೆ = ೨೪ ಕಾಸು (ನಿಕ್ಕಲ್)
೪ ಆಣೆ (ಬೆಳ್ಳಿ)
೮ ಆಣೆ (ಬೆಳ್ಳಿ)
೧ ರೂಪಾಯಿ = ೧೯೨ ಕಾಸು (ಬೆಳ್ಳಿ)

ಜೊತೆಗೆ ನಾಣ್ಯವಲ್ಲದಿದ್ದರೂ "ದುಡ್ಡು", "ಪಾವಲಿ" "ಹಣ ಅಥವ ವರಹ" ಹಾಗು "ದುಗ್ಗಾಣಿ" ಎಂಬ ಪದಗಳು ವ್ಯವಹಾರಿಕವಾಗಿ ಉಪಯೋಗಿಸಲ್ಪಡುತ್ತಿದ್ದವು. ಇವುಗಳನ್ನು "ಕಾಸು" ಮತ್ತು "ಆಣೆ"ಗಳಲ್ಲಿ ಹೇಳಬಹುದಾದರೆ:
೧ ದುಡ್ಡು = ೪ ಕಾಸು
೧ ಪಾವಲಿ = ೪ ಆಣೆ
೧ ಹಣ ಅಥವ ವರಹ= ೪ ಆಣೆ ಪಾವಲಿ
೧ ದುಗ್ಗಾಣಿ = ೮ ಕಾಸು ಅಥವಾ ೨ ದುಡ್ಡು ಎಂದು ಹೇಳಲಾಗುತ್ತಿತ್ತು.

ಈಗಿನ ಖೋಟಾ ನೋಟುಗಳು ಇರುವಂತೆ, ಹಿಂದೆಯೂ ನಾಣ್ಯಗಳ ನಕಲು ಮಾಡಲಾಗುತ್ತಿತ್ತು. ಬೆಳ್ಳಿಕಾಸಿನ ನಕಲನ್ನು "ಸೀಸ"ದಲ್ಲಿ ಮಾಡುತ್ತಿದ್ದರು. ಆದುದರಿಂದ, ನಾಣ್ಯವನ್ನು ಚಿಮ್ಮಿಸಿ ಅದರ ಶಬ್ಧದ ಆಧಾರದ ಮೇಲೆ ಅದು "ಬೆಳ್ಳಿ" ಅಥವ "ಸೀಸ"ದಿಂದ ಮಾಡಲ್ಪಟ್ಟಿದೆ ಎಂಬುದನ್ನು ಗುರುತಿಸುತ್ತಿದ್ದರು. "ಹಣ", "ವರಹ" ಎಂಬ ಪದಗಳನ್ನು ಸಾಮಾನ್ಯವಾಗಿ ಮದುವೆ ಮುಂತಾದ ಸಮಾರಂಭಗಲ್ಲಿ ಹೆಚ್ಚು ಉಪಯೋಗಿಸುತ್ತಿದ್ದರು. ಮದುವೆಗಳಲ್ಲಿ ನೀಡುವ ಉಡುಗೊರೆಯ ಹಣದ (ಮುಯ್ಯಿ) ಪಟ್ಟಿ ಬರೆಯುವಾಗ "ವಧುವಿಗೆ ಸೋದರಮಾವನಿಂದ ನಾಲ್ಕು ವರಹ" ಅಥವಾ "ವರನಿಗೆ ಚಿಕ್ಕಪ್ಪನಿಂದ ಹತ್ತು ಹಣ" ಎಂದು ಹೇಳುತ್ತಿದ್ದರು. ಕೆಲವು ಭಾಗಗಳಲ್ಲಿ "ಆಗ", "ಅಡ್ಡ" ಮುಂತಾದ ಪದಗಳನ್ನು ಈ ಕೆಳಗಿನ ಅರ್ಥದಲ್ಲಿ ಉಪಯೋಗಿಸುತ್ತಿದ್ದರು.
ಆಗ = ಒಂದು
ಅಡ್ಡ = ಎರಡು
ದುಡ್ಡು = ನಾಲ್ಕು
ದುಗ್ಗಾಣಿ = ಎಂಟು

May 27, 2011

60 ಸಂವತ್ಸರಗಳು

1. ಪ್ರಭವ
2. ವಿಭವ
3. ಶುಕ್ಲ
4. ಪ್ರಮೋದ
5. ಪ್ರಜೋತ್ಪತ್ತಿ
6. ಆಂಗೀರಸ
7. ಶ್ರೀಮುಖ
8. ಭಾವ
9. ಯುವ
10. ಧಾತ್ರಿ
11. ಈಶ್ವರ
12. ಬಹುಧಾನ್ಯ
13. ಪ್ರಮಾಧಿ
14. ವಿಕ್ರಮ
15. ವರುಷ/ವೃಷ
16. ಚಿತ್ರಭಾನು
17. ಸ್ವಭಾನು
18. ತಾರಣ
19. ಪಾರ್ಥಿವ
20. ವ್ಯಯ
21. ಸರ್ವಜಿತ್
22. ಸರ್ವಧಾರಿ
23. ವಿರೋಧಿ
24. ವಿಕೃತ
25. ಖರ
26. ನಂದನ
27. ವಿಜಯ
28. ಜಯ
29. ಮನ್ಮಥ
30. ದುರ್ಮುಖ
31. ಹೇವಿಳಂಬಿ
32. ವಿಳಂಬಿ
33. ವಿಕಾರಿ
34. ಶಾರ್ವರಿ
35. ಪ್ಲವ
36. ಶುಭಕೃತ
37. ಶೋಭಾಕೃತ
38. ಕ್ರೋಧಿ
39. ವಿಶ್ವಾವಸು
40. ಪರಾಭವ
41. ಪ್ಲವಂಗ
42. ಕೀಲಕ
43. ಸೌಮ್ಯ
44. ಸಾಧಾರಣ
45. ವಿರೋಧಿಕೃತ
46. ಪರಿಧಾವಿ
47. ಪ್ರಮಾಧಿ
48. ಆನಂದ
49. ರಾಕ್ಷಸ
50. ನಳ
51. ಪಿಂಗಳ
52. ಕಾಳಯುಕ್ತಿ
53. ಸಿದ್ಧಾರ್ಥಿ
54. ರುದ್ರ
55. ದುರ್ಮತಿ
56. ದುಂದುಭಿ
57. ರುದಿರೋದ್ಗಾರಿ
58. ರಕ್ತಾಕ್ಷಿ
59. ಕ್ರೋಧನ
60. ಅಕ್ಷಯ



प्र्भवो विभव शुक्लः प्रमोदूत प्रजपतिः
आन्गिरः शीमुखो भावो युवो धातुस्तथेश्वरः
बहुधान्यः प्रमाथीचविक्रमो विशुवत्सरः
चित्रभनुः स्‍वाभानुस्चा तारणः पार्थिवो व्ययः
सर्वजित्सर्वधरीच विरोधी विक्रुतिः खरः
नन्दनो विजयश्चैवा जयो मन्मथ दूर्मुखौ
हे विलम्बी विलम्बिश्च विकारी शार्वरी प्लवः
शुभाकऋतु शोभक्रुतु क्रोधी विश्वावसु पराभवौ
प्मवन्गः कीलकः सौम्यः साधारण विरोधिक्रुतु
परीधावी प्रमादीचः आनन्दो राक्शसो नलः
पिन्गलः काल्युकिश्च सिद्धार्थि रौद्र दुर्मति
दुन्दुभिः रुधिरोद्गारी रक्ताक्शी क्रोधनोक्षयः

May 2, 2011

ನನ್ನ ಕಲ್ಪನೆಯ ಚೆಲುವೆ

ನನ್ನ ಮನದಾಳದಲ್ಲಿ ಸದಾ ಮಿಡಿಯುತ್ತಿರುವ ನನ್ನ ಕಲ್ಪನೆಯ ಚೆಲುವೆ. ಎಲ್ಲಿ ಅಡಗಿರುವಳೋ ತಿಳಿಯದು, ನಾನು ಅನೇಕರಲ್ಲಿ ನನ್ನ ಚೆಲುವೆಯನ್ನು ಹುಡುಕಲು ಪ್ರಯತ್ನಿಸಿದರೂ ಸಿಗುತ್ತಿಲ್ಲ. ಅಪ್ಪಟ ಕನ್ನಡತಿಯಾದ ನನ್ನ ಕನಸಿನ ಹುಡುಗಿ, ನನ್ನ ಮನದ ಕನ್ನಡಿಯಂತೆ ಪ್ರತಿಬಿಂಬವಾಗಿ ನಿಲ್ಲಬೇಕೆಂಬ ಬಯಕೆ. ಪ್ರೀತಿಯ ಜಗತ್ತಿನಲ್ಲಿ ದೃವತಾರೆಯಾಗಿ ಸದಾ ನಗು-ನಗುತ್ತಾ ಮಿನುಗುತ್ತಾ, ನೋವು ಪದವೇ ತಿಳಿಯದಂತೆ ದೇವಕನ್ಯೆಯಂತೆ ಕಂಗೊಳಿಸಬೇಕು. ನನ್ನ ಭಾವನೆಗಳ ಧ್ವನಿ ಅವಳಾಗಬೇಕು.

ಮರಳಿ ಬರಲಿ ಬಾಲ್ಯ

 ತಾವು ದೊಡ್ಡವರಾಗುತ್ತಾ ತಾವು ಸ್ವತಂತ್ರರು ತಮಗೆ ಇಷ್ಟ ಬಂದಂತೆ ತಾವು ನಡೆದುಕೊಳ್ಳಬಹುದು ಎಂದುಕೊಳ್ಳುತ್ತೇವೆ. ಆದರೆ ನಿಜವಾಗಲು ಅವರು ಸ್ವಾತಂತ್ರ್ಯ ಕಳೆದುಕೊಳ್ಳುತ್ತಾರೆ. ಬಾಲ್ಯದ ದಿನಗಳಲ್ಲಿ ಇದ್ದ ಸ್ವತಂತ್ರತೆ, ಉಲ್ಲಾಸ, ಸಂತೋಷವನ್ನು ದೊಡ್ಡವರಾಗುತ್ತಾ ಕಳೆದುಕೊಳ್ಳುತ್ತೇವೆ. ಸಮಾಜದ ನೀತಿ ನಿಯಮ, ಕಟ್ಟು ಪಾಡುಗಳಲ್ಲಿ ಬಂಧಿಗಳಾಗಿ ನಗುವೇ ಇಲ್ಲದಾಗುತ್ತದೆ. ಚಿಕ್ಕವರಿದ್ದಾಗ ಇದ್ದ ಸಂತೋಷ ಮಾಯವಾಗುತ್ತದೆ. ಸ್ವಾಭಿಮಾನಿಗಳಾಗಿ ನಾನು, ನನ್ನ ಮನೆ, ನನ್ನ ಜನ, ನನ್ನ ಕೆಲಸ ಎಂಬ ಸೀಮಿತ ಪರಿಧಿಯಲ್ಲಿ ನಮ್ಮ ಜೀವನ ನಡೆಸಲಾರೆಂಭಿಸುತ್ತೇವೆ. ಇಲ್ಲಿ ಏನೀದ್ದರೂ ಬರೀ ಕಟ್ಟು ಪಾಡುಗಳಲ್ಲೇ ನಮ್ಮ ಆಸೆ, ಕನಸ್ಸುಗಳನ್ನು ಬಲಿಕೊಡುತ್ತೇವೆ. ಬಾಲ್ಯದಲ್ಲಿರುವಾಗಲೇ ನಮಗೆ ದ್ವೇಷ, ಅಸೂಯೆಗಳನ್ನು ಮನೆಯವರಿಂದಲೇ ಕಲಿಯುತ್ತೇವೆ, ಅವರ ಜಗಳದಲ್ಲಿ ನಾವು ಬಲಿಪಶುಗಳಾಗುತ್ತೇವೆ. ದೊಡ್ಡವರ ರೀತಿ ನೀತಿಗಳಲ್ಲಿ ತಮ್ಮನ್ನು ಅಡಿಯಾಳಾಗಿ ಮಾಡಿಕೊಳ್ಳುತ್ತೇವೆ. ಇಂಥಾ ಸ್ವತಂತ್ರ ಏತಕ್ಕಾಗಿ ಬೇಕು. ಅದಕ್ಕೆ ವಯಸ್ಸಾದಂತೆ ಬಾಲ್ಯದ ಮಧುರ ನೆನಪುಗಳ ನೆನೆಯುತ್ತಾ ಅದರಲ್ಲಿ ಇಂದಿನ ದಿನಗಳಾನ್ನು ಹುಡುಕಲು ಬಯಸುತ್ತೇವೆ. ಹಿಂದಿನ  ಬಾಲ್ಯದ ಕ್ಷಣಗಳು ಮತ್ತೆ ಬರಲಿ ಎಂದು ಬಯಸುತ್ತೇವೆ.

ನಾನು ಕಂಡಂತೆ ’ಜುಗಾರಿ ಕ್ರಾಸ್’


ಕನ್ನಡದ ಶ್ರೇಷ್ಠ ಬರಹಗಾರರಲ್ಲಿ ಪೂರ್ಣಚಂದ್ರ ತೇಜಸ್ವಿಯವರು ಒಬ್ಬರು. ಅವರ ಪ್ರತಿಯೊಂದು ಕೃತಿಗಳು ವಿಶಿಷ್ಟವಾದವುಗಳು. ನಾನು ಅವರ ಜುಗಾರಿ ಕ್ರಾಸ್ ಕಾದಂಬರಿಯನ್ನು ಇತ್ತೀಚಿಗೆ ಪುನಃ ಓದಿದೆ. ಈ ಕಾದಂಬರಿ ಕಾಣಬರುವ ವಿಚಾರಗಳನ್ನು ನನಗೆ ಅನಿಸಿದ ಮಟ್ಟಿಗೆ ಇಲ್ಲಿ ಹಂಚಿಕೊಳ್ಳುತ್ತೇನೆ.
  ಇದೊಂದು ಕೇವಲ ೨೪ ಗಂಟೆಗಳ ಅವಧಿಯಲ್ಲಿ ನಡೆಯುವ ಪತ್ತೆದಾರಿ ಕಾದಂಬರಿಯಾಗಿದೆ. ಈ ಘಟನೆ ನಡೆಯುವ ಪ್ರದೇಶ ಮಂಗಳೂರು - ಬೆಂಗಳೂರು ರಸ್ತೆಯಲ್ಲಿರುವ ಜುಗಾರಿ ಕ್ರಾಸ್ ಮತ್ತು ದೇವಪುರಗಳಲ್ಲಿ. ಕಾದಂಬರಿಯಲ್ಲಿ ರಹಸ್ಯವಾಗಿ ನಡೆಯುವ ಅಪರಾಧ ಪ್ರಕರಣಗಳು ಒಂದು ಕಥೆಯಾದರೆ, ಪತ್ತೆದಾರ ಅವುಗಳನ್ನು ಬಯಲಿಗೆಳೆಯುವ ಕತೆ ಇನ್ನೊಂದು. ಬಸ್ಸಿನಲ್ಲಿ ಪ್ರಯಾಣ ಮಾಡುವ ಸುರೇಶ ಮತ್ತು ಗೌರಿಯರ ಒಂದು ದಿನದ ಅನುಭವ ಓದುಗನಿಗೆ ಒಂದು ಯುಗದ ಅನುಭವವನ್ನು ಉಂಟುಮಾಡುತ್ತದೆ. ಯಾಲಕ್ಕಿಯ ಮೂಟೆಯನ್ನು ಮಾರಲು ಬಸ್ಸಿನಲ್ಲಿ ಸಾಗಿಸುವಾಗ ಸುರೇಶ - ಗೌರಿಯರು ತಮಗೆ ಗೊತ್ತಿಲ್ಲದಂತೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಭೂಗತ ಜಗತ್ತಿನ ಚಕ್ರವ್ಯೂಹದೊಳಗೆ ಸಿಲುಕಿ ಕೊನೆಗೆ ಪಾರಾಗುತ್ತಾರೆ. ಹಾಗೆ ನೋಡಿದರೆ ಇದು ಸಾಹಸ ಕಥೆಯಾಗಿದೆ. ಇವರಿಬ್ಬರ ಸಾಹಸ ಸಿದ್ದಿಯೆಂದರೆ ಕೊನೆಗೆ ಜೀವ ಉಳಿಸಿಕೊಳ್ಳುವುದಾಗಿದೆ.
 ’ಜುಗಾರಿ ಕ್ರಾಸ್’ ಕಾದಂಬರಿಯ ಮೊದಲ ಭಾಗ ಅಮೂರ್ತವಾದ ಭೂಗತ ಜಗತ್ತಿನ ಸ್ವರೂಪವನ್ನು ಪರಿಚಯ ಮಾಡಿಕೊಟ್ಟರೆ, ಎರಡನೆಯ ಭಾಗದಲ್ಲಿ ಸುರೇಶ - ಗೌರಿಯರು ಅದರಲ್ಲಿ ಸಿಕ್ಕಿ ತಪ್ಪಿಸಿಕೊಳ್ಳಲು ಹೆಣಗಾಡುವ ಚಿತ್ರಣವಿದೆ. ಈ ಹೆಣಗಾಟದಲ್ಲಿ ಮನ್ಮಥ ಬೀಡಾಸ್ಟಾಲ್ ನ ಶೇಷಪ್ಪ, ಸುರೇಶನ ಸಹಪಾಟಿ ರಾಜಪ್ಪ ಸೇರಿಕೊಳ್ಳುತ್ತಾರೆ. ಭೂಗತ ಜಗತ್ತೆಂದರೆ ಕೊಲೆ ಮಾಡುವುದು ಅಥವ ಕೊಲೆಯಾಗುವುದು ಇವೆರಡರ ನಡುವೆಯೇ ಅದರ ಅಸ್ತಿತ್ವ. ಇನ್ನೊಂದು ಸಾಧ್ಯತೆಯೆಂದರೆ ಆತ್ಮಹತ್ಯೆ ಅಷ್ಟೆ.
 ಮೂಕಿ ದ್ಯಾವಮ್ಮನ ಮಗಳು ಹೂವಿನ ಮಾಲೆಗಳನ್ನು ಮಾರುತ್ತಿರುವಾಗ ದೌಲತರಾಮ ಅವಳಿಗೆ ಹತ್ತು ರೂಪಾಯಿ ನೋಟು ಕೊಟ್ಟು ಅವಳನ್ನು ಅಲ್ಲಿಂದ  ಸಾಗಹಾಕುವುದು ತಾವು ಮಾಡುವ ಕೃತ್ಯಕ್ಕೆ ಅಡ್ಡಲಾಗಿದ್ದಾಳೆಂಬ ಕಲ್ಪನೆ ಅವರಿಗೆ. ಅವಳು ತನಗೆ ಗೊತ್ತಿಲ್ಲದೆ ಬಂದು ಅಪರಾಧದ ಕೃತ್ಯಕ್ಕೆ ಅಡ್ಡಲಾಗಿ ನಿಂತಿರುವುದೇ ಅವಳ ತಪ್ಪು. ಸುರೇಶ ಗೌರಿಯರು ಕೂಡ ಅವಳಂತೆ ತಮಗೆ ಅರಿವಾಗದಂತೆ ಅಪರಾಧದ ವಿರುದ್ಧ ನಿಂತಿದ್ದಾರೆ.
 ಈ ಅಪರಾಧಗಳ ಲೋಕದ ಅನಾವರಣವನ್ನು ಪತ್ತೇದಾರನಾದ ರಾಜಪ್ಪ ಮಾಡಲು ಹೋಗುತ್ತಾನೆ. ಹಳೆಯ ಕಾವ್ಯದ ಕಡತ - ಸಹ್ಯಾದ್ರಿ ಶಿಖರವೊಂದರಲ್ಲಿ ಕೆಂಪು ರತ್ನಗಳಿರುವ ಸ್ಥಳದ ಸುಳಿವು ಭೂಗತ ಜಗತ್ತಿನ ಅನಾವರಣದ ವಸ್ತುಗಳಾಗಿವೆ.
ಒಟ್ಟಿನಲ್ಲಿ ಜುಗಾರಿ ಕ್ರಾಸ್ ಕಾದಂಬರಿಯಲ್ಲಿ ಅಂತರ್ಗತವಾಗಿರುವ ಸಾಹಸ ಕಥೆ ಮತ್ತು ಪತ್ತೇದಾರಿ ಕಾದಂಬರಿಯಾಗಿ ಅದ್ಭುತವಾಗಿ ಮೂಡಿಬಂದಿದೆ. ಕಾದಂಬರಿಯನ್ನು ಓದುತ್ತಾ ಹೋದಂತೆ ಕಲ್ಪನಾ ಜಗತ್ತಿನಲ್ಲಿ ನಿಂತು ನೋಡುತ್ತಿರುವಂತೆ ತಾನು ಅದರಲ್ಲಿನ ಪಾತ್ರವೆಂಬಂತೆ  ಓದುಗನಿಗೆ ಭಾಷವಾಗುತ್ತದೆ.

ನಿನ್ನ ಪ್ರೇಮದ ಪರಿಯ ನಾನರಿಯೆ


ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ನಿನ್ನೊಳಿದೆ ನನ್ನ ಮನಸು
ಹುಣ್ಣಿಮೆಯ ರಾತ್ರಿಯಲಿ ಉಕ್ಕುವುದು ಕಡಲಾಗಿ
ನಿನ್ನೊಲುಮೆ ನನ್ನ ಕಂಡು, ನಿನ್ನೊಳಿದೆ ನನ್ನ ಮನಸು

ಸಾಗರನ ಹೃದಯದಲಿ ರತ್ನಪರ್ವತಮಾಲೆ
ಮಿಂಚಿನಲಿ ಮೀವುದಂತೆ
ತೀರದಲಿ ಬಳುಕುವಲೆ ಕಣ್ಣಚುಂಬಿಸಿ ಮತ್ತೆ
ಸಾಗುವುದು ಕನಸಿನಂತೆ

ಅಲೆಬಂದು ಕರೆಯುವುದು ನಿನ್ನೊಲುಮೆ ಅರಮನೆಗೆ
ಒಳಗಡಲ ರತ್ನಪುರಿಗೆ
ಅಲೆಯಿಡುವ ಮುತ್ತಿನಲೆ ಕಾಣುವುದು ನಿನ್ನೊಲುಮೆ
ಒಳಗುಡಿಯ ಮೂರ್ತಿಮಹಿಮೆ

ನೀನು ಯಾರೆ?


ಹೊಳೆಯ ಬಂಡೆಯ ಮೇಲೆ ನಾ ನಿನ್ನ ಕಂಡೆ,
ನಿನ್ನ ಹೆರ್‍ಅಳೊಳಗಿತ್ತು ಮಲ್ಲಿಗೆಯ ದಂಡೆ;
ನಿನ್ನ ಹಣೆಯಲ್ಲಿತ್ತು ಕಸ್ತೂರಿ ತಿಲಕ,
ಕುಡಿಹುಬ್ಬುಗಳ ನಡುವೆ ಬೈತಲೆಯ ತನಕ.

ಸೀರೆ ಸೆರಗನು ಹಿಡಿದು ಗಾಳಿಯಲಿ ನಿಂತ
ನಿನ್ನ ನೋಟವೆ ಸಾಕು, ಪ್ರತಿದಿನ ವಸಂತ;
ನಿನ್ನ ಮುಂಬೆರಳಲ್ಲಿ ಹೊಳೆದಿತ್ತು ಮಿಂಚು'
ನೀನುಟ್ಟ ಸೀರೆಯದು ಹೊಬಳ್ಳಿಯಂಚು.

ನಿನ್ನ ಕಿವಿಯಲಿ ಹೊಳೆಯುತಿತ್ತು ಬೇಂಡೋಲೆ,
ನಿನ್ನ ಕೊರಳೊಳಗಿತ್ತು ನವರತ್ನಮಾಲೆ;
ನಿನ್ನ ಕಾಲ್ಗೆಜ್ಜೆಗಳ ಇನಿದನಿಗಳಲ್ಲಿ
ನಾನು ಒಲವನು ಕಂಡೆ ಹಾಡಹಗಲಲ್ಲಿ.

ನಾಕಂಡ ಮಂದಹಾಸವನು ವರ್ಣಿಲಾರೆ,
ಅಪ್ಸರೆಯೊ ಕಿನ್ನರಿಯೊ, ಓ ನೀನು ಯಾರೆ?

-ಮಲ್ಲಿಗೆ ಕವಿ ಕೆ ಎಸ್ ನರಸಿಂಹಸ್ವಾಮಿ

Apr 10, 2011

ಕನ್ನಡ ಪ್ರಸಿದ್ಧ ಗಾದೆಗಳು

ಕನ್ನಡ ಗಾದೆಗಳು

೧. ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
೨. ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
೩. ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
೪. ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
೫. ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
೬. ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
೭. ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
೮. ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
೯. ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
೧೦. ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
೧೧. ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
೧೨. ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ !
೧೩. ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ.
೧೪. ಅಡಿಕೆಕಾಯಿಯನ್ನು ಚೀಲದೊಳಗೆ ಹಾಕಬಹುದು, ಮರ ಆದ ನಂತರ ಹಾಕಬಹುದೇ?
೧೫. ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
೧೬. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
೧೭. ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
೧೮. ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
೧೯. ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
೨೦. ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
೨೧. ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ.
೨೨. ಮೃತ್ಯು ಬಂದ ಮೇಲೆ ವೈದ್ಯ ಬಂದ.
೨೩. ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
೨೪. ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
೨೫. ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
೨೬. ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
೨೭. ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.
೨೮. ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
೨೯. ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ.
೩೦. ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
೩೧. ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
೩೨. ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
೩೩. ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ.
೩೪. ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
೩೫. ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
೩೬. ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
೩೭. ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
೩೮. ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
೩೯. ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
೪೦. ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
೪೧. ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
೪೨. ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.
೪೩. ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
೪೪. ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
೪೫. ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
೪೬. ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
೪೭. ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
೪೮. ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ.
೪೯. ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
೫೦. ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
೫೧. ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
೫೨. ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
೫೩. ಬೇಸರವಿರಬಾರದು, ಅವಸರ ಮಾಡಬಾರದು.
೫೪. ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
೫೫. ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
೫೬. ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
೫೭. ಗದ್ದೆ ಸುಟ್ಟರೂ ಹಾಳಾಗದು ಗಾದೆ.
೫೮. ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ.
೫೯. ಮಾಟ ಮಾಡಿದೋನ ಮನೆ ಹಾಳು.
೬೦. ಒಬ್ಬರ ಕೂಳು ಇನ್ನೊಬ್ಬರ ಕುತ್ತು.
೬೧. ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
೬೨. ಹೊಳೆಯುವುದೆಲ್ಲಾ ಚಿನ್ನವಲ್ಲ.
೬೩. ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
೬೪. ಬರಿಗೈಯವರ ಬಡಿವಾರ ಬಹಳ.
೬೫. ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
೬೬. ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
೬೭. ಅರೆಗೊಡದ ಅಬ್ಬರವೇ ಬಹಳ.
೬೮. ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
೬೯. ಆಪತ್ತಿಗಾದವನೇ ನಿಜವಾದ ಗೆಳೆಯ.
೭೦. ಇಂದಿನ ಸೋಲು ನಾಳಿನ ಗೆಲುವು.
೭೧. ಧೈರ್ಯವಿದ್ದವನಿಗೆ ದೈವವೂ ಅನುಕೂಲ.
೭೨. ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ.
೭೩. ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು.
೭೪. ಉತ್ತಮವಾದ ನಗು ನೇಸರನ ಮಗು.
೭೫. ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ.
೭೬. ಪ್ರಾಮಾಣಿಕತೆಯಿಂದಲೇ ಪಾರಮಾರ್ಥ.
೭೭. ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
೭೮. ಉದ್ದುದ್ದ ಮಾತಿನವರ ಮೊಳಕೈ ಮೊಂಡ.
೭೯. ಕಿಡಿ ಸಣ್ಣದಾದರೂ ಕಾಡೆಲ್ಲವನ್ನು ಸುಡುತ್ತದೆ.
೮೦. ನೋಡಿ ನಡೆದವರಿಗೆ ಕೇಡಿಲ್ಲ.
೮೧. ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
೮೨. ಚಿಂತೆ ಮಾಡಿದರೆ ಸಂತೆ ಸಾಗೀತೆ?
೮೩. ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
೮೪. ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
೮೫. ತಾಯಿ ಬೇಕು ಇಲ್ಲವೇ ಬಾಯಿ ಬೇಕು.
೮೬. ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
೮೭. ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
೮೮. ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
೮೯. ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ.
೯೦. ಮಂತ್ರಕ್ಕಿಂತ ಉಗುಳೇ ಹೆಚ್ಚು.
೯೧. ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
೯೨. ಎಡಗಣ್ಣು ಹೊಡೆದರೆ ನಾರಿಗೆ ಶುಭ.
೯೩. ಊಟವೆಂದರೆ ಊರು ಬಿಟ್ಟುಹೋದಂತೆ.
೯೪. ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
೯೫. ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
೯೬. ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ.
೯೭. ಕಣ್ಣಿಗೂ ಮೂಗಿಗೂ ಮೂರು ಗಾವುದ.
೯೮. ಕಲಹವೇ ಕೇಡಿಗೆ ಮೂಲ.
೯೯. ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
೧೦೦. ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
೧೦೧. ಮಾಡಿದ ರಾಗಿ ಕೊಟ್ರೂ ಮೂರ್ಖನ ಸಹವಾಸ ಬೇಡವೆಂದಂತೆ.
೧೦೨. ಲೋಕ ತಿಳೀಬೇಕು ಲೆಕ್ಕ ಕಲೀಬೇಕು.
೧೦೩. ಸಾಲ್ಗಾರ ಸುಮ್ಮನಿದ್ರು ಸಾಕ್ಷಿಗಾರ ಸುಮ್ಮನಿರ.
೧೦೪. ಹಲ್ಲಿರುವ ತನಕ ಊಟ ಕಣ್ಣಿರುವ ತನಕ ನೋಟ.
೧೦೫. ದಕ್ಷಿಣೆಗಾದರೆ ಮಾತು ಹಿಡಿದಾನು, ಮಂತ್ರಕ್ಕಾದರೆ ಬೆನ್ನು ತೋರ್ಸಿಯಾನು.
೧೦೬. ಭಾವಿಸಿದರೆ ಬಳಗ, ಕೂಡಿಸಿದರೆ ಕಾಸು.
೧೦೭. ಭಾಷೆ ಕೊಟ್ಟವನು ಪೋಷಣೆ ಮಾಡನೇ?
೧೦೮. ಭಾಷೆ ತಿಳಿಯದಿದ್ದರೂ ಹಾಸ್ಯಕ್ಕೆ ಕಡಿಮೆಯಿಲ್ಲ.
೧೦೯. ಭಿಕಾರಿಯಾದವ ಕಾಶಿಗೆ ಹೋದರೂ, ಭಿಕ್ಷಾನ್ನವಲ್ಲದೆ ಪಕ್ವಾನ್ನ ಉಂಡಾನೇ?
೧೧೦. ಮಣದಷ್ಟು ಮಾತಿಗಿಂತ ಕಣದಷ್ಟು ಕೆಲಸ ಲೇಸು.
೧೧೧. ಮಳೆ ನೀರನ್ನು ಬಿಟ್ಟು ಮಂಜಿನ ನೀರಿಗೆ ಕೈಯೊಡ್ಡಿದ ಹಾಗೆ.
೧೧೨. ದುಡಿಯೋ ತನಕ ಮಡದಿ.
೧೧೩. ದೂರವಿದ್ದ ಮಗನಿಗೂ, ಹತ್ತಿರವಿದ್ದ ಮಗನಿಗೂ ಸರಿಬಾರದು.
೧೧೪. ದೊಂಬರಾಟ ಆಡಬಹುದು ಮಕ್ಕಳಾಟ ಆಡೊಕ್ಕಾಗಲ್ಲ.
೧೧೫. ನನಗೆ ನಿನಗೆ ಹಿತ ಇಲ್ಲ, ನಿನ್ನ ಬಿಟ್ಟು ನನಗೆ ಗತಿ ಇಲ್ಲ ಎಂದಂತೆ.
೧೧೬. ನೆಂಟ್ರು ಮನೆಗೆ ಮೂಲ, ಕುಂಟೆತ್ತು ಹೊಲಕ್ಕೆ ಮೂಲ.
೧೧೭. ನರಗುಂದಕ್ಕೆ ಹೊದರೆ ಕುರು ತಪ್ಪೀತೆ?
೧೧೮. ನಾಮವಿದ್ದವನಿಗೆ ಕಾಮ ಕಡಿಮೆಯೇ?
೧೧೯. ಹಲ್ಲಿ ಶಕುನ ಕೇಳಿ ಕಲ್ಲಿಂದ ಹೊಡೆಸಿಕೊಂಡಂತೆ.
೧೨೦. ಸಾಲಗಾರನ ಹೆಂಡತಿ ಶೋಕಿಮಾಡಿದರೇನು?
೧೨೧. ವೈಕುಂಠಕ್ಕೆ ಹೋಗಲಿಕ್ಕೆ ಕುಂಟು ದಾಸಯ್ಯನ ಮಧ್ಯಸ್ತಿಕೆಯೇ?
೧೨೨. ಮೂರು ಕಾಸಿನ ಮಾಂಸವಿಲ್ಲದಿದ್ದರೂ, ಮಾತು ಮಾತ್ರ ಜೋರು.
೧೨೩. ರೊಕ್ಕ ಕೊಟ್ಟು ರಟ್ಟೆ ಮುರಿಸಿಕೊಂಡಂತೆ.
೧೨೪. ಜಾತಿ ನೀತಿಯಿಲ್ಲ, ಮಾರಿಗೆ ಕರುಣೆ ಇಲ್ಲ.
೧೨೫. ಹೂಡಿದರೆ ಒಲೆ, ಮಡಿದರೆ ಮನೆ.
೧೨೬. ಹತ್ತು ಜನರ ಹುಲ್ಲು ಕಡ್ಡಿ ಒಬ್ಬನಿಗೆ ತಲೆ ಹೊರೆ.
೧೨೭. ಪಂಗಡವಾದವ ಸಂಗಡ ಬಂದಾನೆ?
೧೨೮. ಅಗ್ನಿಗೆ ತಂಪುಂಟೆ, ವಿಷಕ್ಕೆ ರುಚಿಯುಂಟೆ, ದಾರಿಕೋರನಿಗೆ ಧರ್ಮವುಂಟೆ?
೧೨೯. ಬಸವನ ಹಿಂದೆ ಬಾಲ, ಲಗ್ನದ ಹಿಂದೆ ಸಾಲ.
೧೩೦. ತುಪ್ಪ ತಿಂದ ಮಾತಿಗಷ್ಟು ತಪ್ಪು ಮಾತು ಬಂತು.
೧೩೧. ತೇರಾದ ಮೇಲೆ ಜಾತ್ರೆ ಸೇರಿತು.
೧೩೨. ಆಸೆಗೆ ತಕ್ಕ ಪರಿಶ್ರಮ ಬೇಕು.
೧೩೩. ಎಲ್ಲರಿಗೂ ಹಿಡಿಸುವ ಸಂಪ್ರದಾಯ ಯಾವುದೂ ಇಲ್ಲ.
೧೩೪. ಏನಾದರೂ ಆಗು ಮೊದಲು ಮಾನವನಾಗು.
೧೩೫. ಬಕ್ಕಳ ಹೊನ್ನಿದ್ದರೆ ಊರೆಲ್ಲಾ ನೆಂಟರು.
೧೩೬. ಕಷ್ಟಗಳು ಹೇಳದೆ ಕೇಳದೆ ಬರೋ ನೆಂಟರ ಹಾಗೆ.
೧೩೭. ಕರ್ಪೂರವ ತಿಪ್ಪೇಲಿಟ್ರೂ ತನ್ನ ಸುವಾಸನೆ ಬಿಡದು.
೧೩೮. ಗಣೇಶನ್ನ ಮಾಡು ಅಂದ್ರೆ ಅವರ ಅಪ್ಪನ ಮಾಡಿದನಂತೆ.
೧೩೯. ಜ್ಞಾನಿ ಬಂದರೆ ಗೌರವಿಸು, ಹೀನ ಬಂದರೆ ತ್ಯಜಿಸು.
೧೪೦. ಚಿನ್ನದ ಸೂಜಿ ಅಂತ ಕಣ್ಣು ಚುಚ್ಚಿಕೊಂಡಾರೆ?
೧೪೧. ಟೊಳ್ಳು ಮಾತು ಸುಳ್ಳಿಗಿಂತ ಕಡೆ.
೧೪೨. ಠಕ್ಕು ಇರುವವನಿಗೆ ಠಿಕಾಣಿ ಸಿಗದು.
೧೪೩. ತೂಕ ಸರಿಯಿದ್ದರೆ ವ್ಯಾಪಾರ.
೧೪೪. ನಡೆದಷ್ಟು ನೆಲ, ಪಡೆದಷ್ಟು ಫಲ.
೧೪೫. ಮುಳ್ಳು ಬಿತ್ತಿದವನಿಗೆ ನೀನು ಹೂಬಿತ್ತು.
೧೪೬. ಪುಷ್ಪ ಡೊಂಕಾದರೇನು, ಪರಿಮಳ ಡೊಂಕೇ?
೧೪೭. ಬುದ್ಧಿಯಿಲ್ಲದವನ ಐಶ್ವರ್ಯ, ಕಡಿವಾಣ ಇಲ್ಲದ ಕುದುರೆಯಂತೆ.
೧೪೮. ರಸ್ತೇಲಿ ಕುತ್ಕೊಂಡು ಗಳಗಳನೆ ಅತ್ತರೆ ಹೋದ ಪ್ರಾಯ ಬಂದೀತೆ?
೧೪೯. ವೈರತ್ವ ನಾಶಕ್ಕೆ ವಾತ್ಸಲ್ಯವೇ ಮದ್ದು.
೧೫೦. ಸಂತೋಷವೇ ಯೌವನ, ಚಿಂತೆಯೇ ಮುಪ್ಪು.
೧೫೧. ಹಸಿದವರ ಮುಂದೆ ಭಾಷಣ ಮಾಡಿದ ಹಾಗೆ.
೧೫೨. ಹಳೆಯ ಕೋಟು ಧರಿಸಿ, ಹೊಸ ಪುಸ್ತಕ ಕೊಳ್ಳಿ.
೧೫೩. ಊಟಕ್ಕೆ ಮೊದಲು ಉಪ್ಪಿನ ಕಾಯಿ, ಮಾತಿಗೆ ಮೊದಲು ಗಾದೆ.
೧೫೪. ಆರಿದ್ರೆ ಮಳೆಯಲ್ಲಿ ಆದವನೇ ಒಡೆಯ.
೧೫೫. ಸ್ವಾತಿ ಮಳೆ ಬಿದ್ರೆ ಮುತ್ತಿನಂಥ ಜೋಳ.
೧೫೬. ಕುಲ ಬಿಟ್ಟರೂ ಛಲ ಬಿಡಬೇಡ.
೧೫೭. ಹೊಸ ಮಂಜು ಹಳೆಯದನ್ನು ಕೊಚ್ಚದಿದ್ದೀತೆ.
೧೫೮. ಕೆಟ್ಟದಲ್ಲದ ಮೇಲೆ ಪಿಸುಗುಟ್ಟೋದು ಯಾಕೆ?
೧೫೯. ಇಬ್ಬರು ಒಪ್ತಾರೆ ಮೂವರು ವಿರೋಧಿಸುತ್ತಾರೆ ಎಂದಂತೆ!
೧೬೦. ಮನೇಲಿ ಕತ್ತಲೆ, ಪರರಿಗೆ ದೀಪ ದಾನ ಮಾಡಿದ.
೧೬೧. ಇರೋದು ಕಲಿಸುತ್ತೆ, ಇಲ್ಲದ್ದು ನಾಚಿಸುತ್ತೆ.
೧೬೨. ಒಬ್ಬನ ಗಡ್ಡಕ್ಕೆ ಬೆಂಕಿ ಹತ್ತಿದಾಗ, ಮತ್ತೊಬ್ಬ ಕೈ ಕಾಯಿಸಿದ.
೧೬೩. ಮನೆಯೊಡತಿ ಮುಖದ ಮೇಲೆ ಉಗುಳಿದರೂ ಹೊರಗೆ ಬಂದು ನಾನು ಬೆವತಿದ್ದೇನೆ ಅಂದಂತೆ!
೧೬೪. ಹುಲಿ ಹಸಿದಾಗ ಹುಲ್ಲು ತಿಂದೀತೆ?
೧೬೫. ಕುದುರೆ ಕುರುಡಾದರೂ ಕಡಿಮೆಯೇನೂ ತಿನ್ನುವುದಿಲ್ಲ!
೧೬೬. ದುರುಳನಿಂದಲೇ ದುರುಳುತನ.
೧೬೭. ಅಕಾಲದಲ್ಲಿ ಬೆಳೆಯಿದ್ದಂತೆ ವೃದ್ಧಾಪ್ಯದಲ್ಲಿ ಮಕ್ಕಳು.
೧೬೮. ನೆಂಟರನ್ನು ಲಕ್ಷಿಸದಿರಲು, ಸ್ನೇಹಿತರನ್ನು ಅಲಕ್ಷಿಸದಿರು.
೧೬೯. ಕಸದಲ್ಲಿ ಮಲಗಿ ಅರಮನೆ ಕನಸು ಕಂಡಂತೆ.
೧೭೦. ಮಧ್ಯಾಹ್ನದ ಊಟವಾದಮೇಲೆ ಮುಳ್ಳಿನ ಮೇಲಾದರೂ ಮಲಗು, ರಾತ್ರಿ ಊಟವಾದ ಮೇಲೆ ಅರ್ಧ ಮೈಲಿ ನಡೆ.
೧೭೧. ಹುಟ್ಟಿನಿಂದಲೇ ವಕ್ರವಾದದ್ದು, ಪೋಷಣೆಯ ಮೂಲಕ ಸರಿಯಾದಂತೆ.
೧೭೨. ಬಾವಿಯ ಬಾಯನ್ನು ಮುಚ್ಚಬಹುದು, ಜನಗಳ ಬಾಯನ್ನಲ್ಲ.
೧೭೩. ಆಳವಿಲ್ಲದ ನೀರು ಭಾರಿ ಶಬ್ದ ಮಾಡೀತು.
೧೭೪. ತನ್ನ ಯಂತ್ರಕ್ಕೆ ಎಣ್ಣೆ ಹಾಕಲೂ ಆಗದವ ಇನ್ನೊಬ್ಬರಿಗೆ ಉಪದೇಶ ನೀಡಿದಂತೆ.
೧೭೫. ಪಾದಕ್ಕೆ ತಕ್ಕಂತೆ ಚಪ್ಪಲಿ ತಗೊ, ಬಾಗಿಲಿನೆತ್ತರಕ್ಕೆ ತಕ್ಕಂತೆ ಬಗ್ಗಿ ನಡಿ.
೧೭೬. ಮನೆಯ ಕಷ್ಟಕ್ಕೆ ನೆರೆಮನೆಯವರು ಹೊಣೆ ಏನು?
೧೭೭. ಮನೆಯ ಬಾಗಿಲಿಗೆ ಬೀಗ ಹಾಕಿಕೋ, ಮನದ ಬಾಗಿಲನ್ನು ತೆರೆದಿಡು.
೧೭೮. ನಗುವೇ ಆರೋಗ್ಯದ ಗುಟ್ಟು.
೧೭೯. ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನು, ರೋಗವನ್ನು ದೂರವಿಡು.
೧೮೦. ಬೆಕ್ಕು ನಮ್ಮನೇದು, ಹಾಲು ಪಕ್ಕದ ಮನೇದು.
೧೮೧. ಕಹಿ ಪದಾರ್ಥ ತಿಂದು ಸಿಹಿ ಮಾತನಾಡು.
೧೮೨. ಮುಖ ನೋಡಿ ಮನ ತಿಳಿ.
೧೮೩. ಮಾತು ಚಿಕ್ಕದಾಗಿರಲಿ, ಕೆಲಸ ಚೊಕ್ಕವಾಗಿರಲಿ.
೧೮೪. ಮಾತು ಮೊಳದುದ್ದ, ಕೆಲಸ ಕಿರುಬೆರಳುದ್ದ.
೧೮೫. ಮನೆ, ಮನ ಓಡೆದರೆ ಅಂಟಿಸಲಾಗದ ಕನ್ನಡಿಯಂತೆ.
೧೮೬. ಕೋಪ ಕೆಲಸ ಕೆಡಿಸುತ್ತೆ, ಶಾಂತಿ ಮುಂದೆ ನಡೆಸುತ್ತೆ.
೧೮೭. ಮನುಜನಾಗಿ ಹುಟ್ಟಿ ಪಶುವಿನಂತೆ ಬದುಕಿದಂತೆ!
೧೮೮. ಕಳೆದ ದಿನಗಳು ಬರೆದ ಪುಟಗಳಂತೆ.
೧೮೯. ಪರಿಚಿತರ ಮರೆಯಬೇಡ, ಅಪರಿಚಿತರ ನಂಬಬೇಡ.
೧೯೦. ಹಲ್ಲಿಲ್ಲದಿದ್ದರೂ ಚಕ್ಕುಲಿ ತಿನ್ನೋ ಚಪಲ.
೧೯೧. ಒಗ್ಗಿದರೆ ಮನೆಯಾದರೇನು, ಸ್ಮಶಾನವಾದರೇನು?
೧೯೨. ಕೆಡುವವರು ಮನೇಲಿದ್ರು ಕೆಡುತ್ತಾರೆ.
೧೯೩. ನಮ್ಮಬುದ್ಧಿ ಪರರ ಕೈಯಲ್ಲಿದ್ದಂತೆ.
೧೯೪. ಮೆತ್ತಗಿದ್ರೆ ತುಳೀತಾರೆ, ಜೋರಾಗಿದ್ರೆ ಹೆದ್ರತಾರೆ.
೧೯೫. ನೋಡಿ ನಡೆದಾಗ ಎಡವೋದು ತಪ್ಪುತ್ತೆ.
೧೯೬. ತೀರ್ಥ ಎಂದು ಎಲ್ಲೆಲ್ಲೋ ನೀರು ಕುಡಿದಂತೆ!
೧೯೭. ಹಳೇ ಚಪ್ಪಲಿ ಆದ್ರೂ ಪರವಾಗಿಲ್ಲ, ಬರಿಗಾಲಲ್ಲಿ ನಡೀಬೇಡ.
೧೯೮. ರೈತನ ಮುಗ್ಗು ನಾಡಿನ ಕುಗ್ಗು.
೧೯೯. ದರಿದ್ರ ಏಳಗೊಡುವುದಿಲ್ಲ, ಆಲಸ್ಯ ಉಣಗೊಡುವುದಿಲ್ಲ.
೨೦೦. ನಾಚಿಕೆ ಬಿಟ್ಟವ ಊರಿಗೇ ದೊಡ್ಡವ.         
೨೦೧. ಎರೆ-ತೆರೆ ಬಂಗಾರ, ಮರಳು ಬರೀ ಸಿಂಗಾರ!
೨೦೨. ಹತ್ತೋಕ್ ಮೊದ್ಲು ಕುದರೆ ನೋಡು, ಬಿತ್ತೊಕ್ ಮೊದ್ಲು ಹೊಲ ನೋಡು.
೨೦೩. ಅಶ್ವಿನೀ ಸಸ್ಯನಾಶಿನೀ.
೨೦೪. ಭರಣಿ ಮಳೆ ಧರಣಿ ಬೆಳೆ.
೨೦೫. ರೋಹಿಣಿ ಮಳೆ ಓಣಿಯೆಲ್ಲಾ ಕೆಸರು.
೨೦೬. ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ.
೨೦೭. ಆದರೆ ಆರಿದ್ರಾ ಇಲ್ವಾದ್ರೆ ದರಿದ್ರ!
೨೦೮. ಹಸ್ತ ಇಲ್ದಿದ್ರೆ ಒಕ್ಕಲಿಗ ಹಲ್ಲು ಕಿಸ್ದ.
೨೦೯. ಸ್ವಾತಿ ಮಳೆ ಮುತ್ತಿನ ಬೆಳೆ.
೨೧೦. ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
೨೧೧. ಅನುರಾಧ ಬಂದರೆ ನಮ್ಮ ರಾಗಿ ನಮ್ಮದು.
೨೧೨. ಚಿತ್ತಾ ಮಳೆ ವಿಚಿತ್ರ ಬೆಳೆ!
೨೧೩. ಪೂರ್ವಾಷಾಢ-ಉತ್ತರಾಷಾಢ ಬೇಡವೇ ಬೇಡ.
೨೧೪. ಬಾಡಿಗೆ ಎತ್ತು ಅಂತ ಹೊಡಿದು ಬಡಿಬಾರದು.
೨೧೫. ಆಕಳಿಲ್ಲದವ ಬೆಳೆಸು ಮಾಡ್ಯಾನ, ಆಕಳಿದ್ದವ ಮಕ್ಕಳ ಸಾಕ್ಯಾನ.
೨೧೬. ಉಣಬೇಕು- ಉಡಬೇಕು ಎಂಬೋದಾದ್ರೆ ಎಮ್ಮೆ ಕಟ್ಟಬೇಕು.
೨೧೭. ಬಾಳೆ ಬೆಳೆದವ ಬಾಳಿಯಾನು.
೨೧೮. ತೆಂಗು ಬೆಳೆದವನಿಗೂ ಗಂಡು ಹೆಡೆದವಳಿಗೂ ಚಿಂತೆಯಿಲ್ಲ.
೨೧೯. ತೋಟ ಮಾಡಿದವನಿಗೆ ಕೋಟಲೆಯಿಲ್ಲ.
೨೨೦. ಬಲ್ಲಿದವನಿಗೆ ಕಬ್ಬು.
೨೨೧. ಆದರೆ ಒಂದಡಿಕೆ ಮರ, ಹೋದರೆ ಒಂದು ಗೋಟು.
೨೨೨. ತಂದೆ, ತಾಯಿ ಸತ್ತರೂ ಸೋದರ ಮಾವ ಇರಬೇಕು.
೨೨೩. ವಿದ್ಯಾವಂತನಾದರೆ ಜಗತ್ತಿನ ಆಡಳಿತವನ್ನೇ ನಡೆಸಬಹುದು.
೨೨೪. ಪರಿಸರ ಮಾಲಿನ್ಯ ವಿನಾಶಕ್ಕೆ ಕಾರಣ.
೨೨೫. ದೇಹಕ್ಕೆ ಮುಪ್ಪಾದರೇನಾಯ್ತು, ಅಧ್ಯಯನಕ್ಕೆ ಮುಪ್ಪಿದೆಯೇ?
೨೨೬. ಶರಣು ಆದವನಿಗೆ ಮರಣವಿಲ್ಲ.
೨೨೭. ಜಾಣನಿಗೆ ಮೂರು ದಾರಿ, ಕೋಣನಿಗೆ ಒಂದೇ ದಾರಿ.
೨೨೮. ಗುರುವಿಲ್ಲದೇ ಮಠವಿಲ್ಲ, ಹಿರಿಯರಿಲ್ಲದೆ ಮನೆಯಿಲ್ಲ.
೨೨೯. ಮನೆ ಗೆದ್ದು ಮಾರು ಗೆಲ್ಲು.
೨೩೦. ಮಾತು ಅಂಗಾರ ಮೌನ ಬಂಗಾರ
೨೩೧. ಗುರಿಯಿಟ್ಟು ಗುಂಡು ಹಾಕು, ಸಮಯ ಸಾಧಿಸಿ ಬೇಟೆಯಾಡು.
೨೩೨. ಮನೆಯಲ್ಲಿ ರಾಮಣ್ಣನಂತೆ, ಬೀದಿಯಲ್ಲಿ ಕಾಮಣ್ಣನಂತೆ.
೨೩೩. ಕೆಟ್ಟದ್ದನ್ನು ಬಯಸಬೇಡ, ಒಳ್ಳೆಯದನ್ನು ಬಿಡಬೇಡ.
೨೩೪. ಮಾನವನಾದ ಮೇಲೆ ಮೂರು ಆಕ್ಷರ ಮೊದಲು ಕಲಿ.
೨೩೫. ಒಲೆಯಮೇಲೆ ಇಟ್ಟಾಗ ಉಕ್ಕಿದಂತೆ ಹಾಲು, ಒಗ್ಗಟ್ಟಿಲ್ಲದ ಮನೆ ಬೀದಿಪಾಲು.
೨೩೬. ಬಾಲ್ಯವಿಲ್ಲದೆ ಯೌವ್ವನವಿಲ್ಲ, ಯೌವ್ವನವಿಲ್ಲದೆ ಮುಪ್ಪಿಲ್ಲ.
೨೩೭. ದಯವಿಲ್ಲದ ಧರ್ಮವಿಲ್ಲ.
೨೩೮. ಮಾತಿಗೆ ನೆಲೆಯಿಲ್ಲ, ಪ್ರೇಮಕ್ಕೆ ಬೆಲೆಯಿಲ್ಲ.
೨೩೯. ಕೋಣನಿಗೆ ಏನು ಗೊತ್ತು ಲತ್ತೆ ಪೆಟ್ಟು.
೨೪೦. ಆಸೆಯಿಲ್ಲದವನು ದೇಶಕ್ಕೆ ಶ್ರೀಮಂತ.
೨೪೧. ಇನ್ನೊಬ್ಬರ ಮಾತಿಗೆ ಕಿವಿಗೊಡಬೇಡ, ಚಾಡಿಹೇಳಿ ಜಗಳ ಹಚ್ಚಬೇಡ.
೨೪೨. ಕೋಣನಾಗಿರುವುದಕ್ಕಿಂತ ಜಾಣನಾಗಿರುವುದು ಲೇಸು.
೨೪೩. ಗೆಳೆತನದಲ್ಲಿ ಮೋಸಮಾಡಬೇಡ.
೨೪೪. ಬಾಯಿಯಲ್ಲಿ ಬೆಲ್ಲ ಎದೆಯಲ್ಲಿ ನೀಚತನ.
೨೪೫. ಹಿಮಾಲಯದಲ್ಲಿ ಹಿಮ ಹೆಚ್ಚಂತೆ, ವೀರಭದ್ರನಲ್ಲಿ ಅವತಾರ ಹೆಚ್ಚಂತೆ.
೨೪೬. ಕಾಯಕವನ್ನು ಸದಾ ಮಾಡು, ಸೋಮಾರಿತನವನ್ನು ಬಿಡು.
೨೪೭. ಮೈತುಂಬ ಕಣ್ಣಿರಲಿ, ಕೈಯಲ್ಲಿ ಪೆನ್ನಿರಲಿ.
೨೪೮. ಹಿರಿಯರ ಮಾತಿಗೆ ಕಿವಿಗೊಡು, ಚುಚ್ಚುಮಾತಿಗೆ ಬೆನ್ನು ಕೊಡು.
೨೪೯. ವಿನಯದಿಂದ ವಿಶ್ವವನ್ನು ಗೆಲ್ಲು, ಪರನಿಂದೆ ಮಹಾಪಾಪ.
೨೫೦. ಮೊದಲು ಕಣ್ಣು ಬಿಡು, ನಂತರ ಕೈ ಮಾಡು.
೨೫೧. ನಿನ್ನಿಂದ ಆದ ಪಾಪ, ಅದೇ ನಿನಗೆ ಶಾಪ.
೨೫೨. ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ, ಕೆಲಸವಿಲ್ಲದ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.
೨೫೩. ಖೀರು ಕುಡಿದವ ಓಡಿಹೋದ, ನೀರು ಕುಡಿದವ ಸಿಕ್ಕಿಬಿದ್ದ.
೨೫೪. ಯಾದವೇಂದ್ರ ದನ ಕಾದ, ರಾಘವೇಂದ್ರ ರಾಜ್ಯವಾಳಿದ.
೨೫೫. ಹಟ್ಟಿ ತುಂಬಾ ಹಸು, ಹಾಲು ಮಾತ್ರ ತುಸು.
೨೫೬. ಹಾಲು ಕುಡಿದು ಹಾಗಲಕಾಯಿ ತಿಂದಂತೆ.
೨೫೭. ಹುಲಿಗಲ್ಲ, ಸಿಂಹಕ್ಕಲ್ಲ, ಮನೆಯ ಹೆಂಡತಿಯ ನೆರಳಿಗಂಜಿದ.
೨೫೮. ಕೋಳಿಯ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರುವುದನ್ನು ಬಿಟ್ಟೀತೆ?
೨೫೯. ಏನು ಬೇಡಿದರೊಬ್ಬ ದಾನಿಯನ್ನು ಬೇಡು, ದೀನನಾ ಬೇಡಿದರೆ ಆ ದೀನ ಏನು ಕೊಟ್ಟಾನು?
೨೬೦. ಇತ್ತಿತ್ತ ಬಾ ಎಂದರೆ ಹೆಗಲೇರಿ ಕುಳಿತ.
೨೬೧. ಹಣದಲ್ಲಿ ಬಡವನಾದರೂ ಬುದ್ಧಿಯಲ್ಲಿ ಬಡವನಾಗಬಾರದು.
೨೬೨. ಹಣವಿಲ್ಲದ ಮನುಷ್ಯ, ರೆಕ್ಕೆ ಇಲ್ಲದ ಪಕ್ಷಿಯಂತೆ.
೨೬೩. ಹಡಗಿನ ವ್ಯಾಪರ, ಉಪ್ಪಿಗೆ ಬಡತನ.
೨೬೪. ಬುದ್ಧಿಗಳ್ಳನಿಗೆಲ್ಲಿ ಸತ್ಯ, ಸದಾಚಾರ!
೨೬೫. ಚಾತುರ್ಯ ಬಲ್ಲವನಿಗೆ ಚಾಚೂ ಚಿಂತಿಲ್ಲ.
೨೬೬. ಸತ್ತವರಿಗೆ ಸಂಗವಿಲ್ಲ, ಕೆಟ್ಟವರಿಗೆ ನೆಂಟರಿಲ್ಲ.
೨೬೭. ನಿದ್ದೆಗೆ ಮದ್ದಿಲ್ಲ, ವಜ್ರಕ್ಕೆ ಬೆಲೆಯಿಲ್ಲ.
೨೬೮. ಮನೆ ಮಕ್ಕಳು ಮಾಣಿಕ್ಯ, ನೆರೆಮನೆ ಮಕ್ಕಳು ಕಸಿವಿಸಿ.
೨೬೯. ಹೆಣ್ಮಕ್ಕಳಿಗೆ ತಾಯಿ ಶಿಕ್ಷೆ,, ಗಂಡ್ಮಕ್ಕಳ್ಳಿಗೆ ತಂದೆ ಶಿಕ್ಷೆ.
೨೭೦. ಮುಖಕ್ಕೆ ಮೂಗು ಚೆಂದ, ಮೂಗಿಗೆ ಮೇಲೆರಡು ಕಣ್ಣು ಚೆಂದ.
೨೭೧. ವಯಸ್ಸಿಗೆ ತಕ್ಕ ಬುದ್ಧಿ ಕಲಿ.
೨೭೨. ಕಾಲಿದ್ದವನಿಗೆ ಆಟ, ಕಣ್ಣಿದ್ದವನಿಗೆ ನೋಟ.
೨೭೩. ಉಗುಳಿ ಉಗುಳಿ ರೋಗ, ಬೊಗಳಿ ಬೊಗಳಿ ರಾಗ.
೨೭೪. ಆಸೆ ಆಸ್ತಿ ಮಾಡ್ತು, ದುರಾಸೆ ನಾಶ ಮಾಡ್ತು.
೨೭೫. ಅಪಕೀರ್ತಿ ತರುವ ಮಗನಿಗಿಂತ, ಸತ್ಕೀರ್ತಿ ತರುವ ಆಳೇ ಮೇಲು.
೨೭೬. ಕೊಟ್ಟು ಕೆಟ್ಟವರಿಲ್ಲ, ತಿಂದು ಬದುಕಿದವರಿಲ್ಲ.
೨೭೭. ಸಮಯಕ್ಕೆ ಬಾರದ ಬುದ್ಧಿ, ಸಾವಿರ ಇದ್ದರು ಲದ್ದಿ,
೨೭೮. ಹೊರಗೆ ಝಗ ಝಗ, ಒಳಗೆ ಭಗ ಭಗ.
೨೭೯. ಕಲ್ಲಾದರು ಕರಗಬಹುದು, ಕಪಟಿಯ ಮನಸ್ಸು ಕರಗದು.
೨೮೦. ಮೂಕವೇದನೆಯು ಸತ್ಯಕ್ಕಿಂತ ಮೇಲು.
೨೮೧. ಕೃತಿಯಿಲ್ಲದ ಮಾತು, ಕಸ ಬೆಳೆದ ತೋಟವಿದ್ದಂತೆ.
೨೮೨. ಒಳ್ಳೆಯ ಕೆಲಸಕ್ಕೆ ವಿಘ್ನ ಹೆಚ್ಚು.
೨೮೩. ಲೆಕ್ಕಕ್ಕಿಂತ ಹೆಚ್ಚು ಹೊರಬಾರದು, ಲೆಕ್ಕಕ್ಕಿಂತ ಹೆಚ್ಚು ದೂರೆಬಾರದು.
೨೮೪. ಅರ್ಧ ಕಲಿತವನ ಆಬ್ಬರ ಹೆಚ್ಚು.
೨೮೫. ದೇಶ ತಿರುಗಬೇಕು, ಭಾಷೆ ಕಲಿಯಬೇಕು.
೨೮೬. ಆಸೆಗೆ ಮಿತಿಯಿಲ್ಲ, ಆಕಾಶಕ್ಕೆ ಅಳತೆಯಿಲ್ಲ.
೨೮೭. ಅಲ್ಪರ ಸಂಗ ಅಭಿಮಾನ ಭಂಗ.
೨೮೮. ಸಂಕೋಚ ಮಾಡಿದರೆ ಸಂಕಪಾಷಾಣವೂ ಸಿಗದು.
೨೮೯. ಬಾವಿ ತೋಡದೆ ನೀರು ಸಿಗದು, ಪ್ರಯತ್ನ ಮಾಡದೆ ಫಲ ಸಿಗದು.
೨೯೦. ಪಡಿತಿಂದು ಗುಡಿಯಲ್ಲಿ ಉರುಳಾಡಿದ.
೨೯೧. ನೋಡಿ ನಡೆದವನಿಗೆ ಕೇಡಿಲ್ಲ.
೨೯೨. ಪದವೂ ಮುಗಿಯಿತು, ತಂತಿಯೂ ಹರಿಯಿತು.
೨೯೩. ಪದವಿ ಬಂದ ಬಳಿಕ ಮದವೂ ಬರತಕ್ಕದ್ದೆ.
೨೯೪. ಪಾಪಕ್ಕೆ ಹೆದರು, ತಾಪಕ್ಕೆ ಹೆದರದಿರು.
೨೯೫. ಪುಷ್ಪವಿಲ್ಲದ ಪೂಜೆ, ಅಶ್ವವಿಲ್ಲದ ಅರಸನಿಗೆ ಸಮ.
೨೯೬. ಮಗ ಸಣ್ಣವನಾದರೂ, ಮಾತು ಸಣ್ಣದಲ್ಲ.
೨೯೭. ಮಂತ್ರ ಸ್ವಲ್ಪ, ಉಗುಳೇ ಬಹಳ.
೨೯೮. ಮಾನ ಹೋದ ಮೇಲೆ ಮರಣ ಬಂದ ಹಾಗೆ.
೨೯೯. ಬೆಲ್ಲವಿದ್ದಲ್ಲಿ ನೊಣ, ಕೆಂಡವಿದ್ದಲ್ಲಿ ಕಾವು.
೩೦೦. ಬೇಕಾದ ಮಾತು, ಬೆಲ್ಲಕ್ಕಿಂತ ಸವಿ.
೩೦೧. ಬಾಯಿ ಬಂಗಾರ, ಮನ ಅಂಗಾರ.
೩೦೨. ಬಾಯಿಯಿದ್ದ ಮಗ ಬದುಕುವನು.
೩೦೩. ಭಾರವಾದ ಪಾಪಕ್ಕೆ ಘೋರವಾದ ನರಕ.
೩೦೪. ಬೀಜದಂತೆ ವೃಕ್ಷ, ವೃಕ್ಷದಂತೆ ಬೀಜ.
೩೦೫. ಬಿಸಿಯಾದರೆ ಮಾತ್ರ ಬೆಣ್ಣೆ ಕರಗುವುದು.
೩೦೬. ಕಲಿತವನಿಗಿಂತ ನುರಿತವನೇ ಮೇಲು.
೩೦೭. ಕಷ್ಟದಂತೆ ಫಲ, ಮನದಂತೆ ಮಹಾದೇವ.
೩೦೮. ಕೀಟ ಸಣ್ಣದಾದರೂ ಕಾಟ ಬಹಳ.
೩೦೯. ಕುರಿ ಹಿಂಡಲ್ಲಿ ತೋಳ ಹೊಕ್ಕಂತೆ.
೩೧೦. ಕೂಳಿಗೆ ಮೂಲ ಭೂಮಿಗೆ ಭಾರ.
೩೧೧. ಕೇಳುವವರ ಮುಂದೆ ಹೇಳುವವರು ದಡ್ಡರು.
೩೧೨. ಹಿರಿಯರಿಗೆ ಶಿರಬಾಗು, ಗುರುವಿಗೆ ತಲೆಬಾಗು.
೩೧೩. ಹಿಡಿ ತುಂಬ ಹಣವಿದ್ದರು ಗುಡಿ ಚೆನ್ನಾಗಿರಬೇಕು.
೩೧೪. ಹಸಿದವನಿಗೆ ಹಳಸಿದ್ದೇ ಪಾವನ.
೩೧೫. ಹರಿದಿದ್ದೇ ಹಳ್ಳ, ನಿಂತಿದ್ದೇ ತೀರ್ಥ.
೩೧೬. ಸುಳ್ಳು ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು.
೩೧೭. ಸುಣ್ಣ ತಿಂದ ಮಂಗ ಹಲ್ಲು ಕಿಸಿದಂತೆ.
೩೧೮. ಸುಡುಗಾಡಿನಲ್ಲಿ ಕುಳಿತು ಸುಖ ಬಯಸಿದಂತೆ.
೩೧೯. ಎಣ್ಣೆ ತಣ್ಣಗಾದರೆ ಬೆಣ್ಣೆಯ ಹಾಗೆ ಇದ್ದೀತೆ?
೩೨೦. ಅಹಂಕಾರ ಇದ್ದ ಮನುಷ್ಯ ಏನನ್ನೂ ಸಾಧಿಸಲಾರ.
೩೨೧. ಕಡಲೆಗೆ ಮುಂದು ಕಡಿವಾಣಕ್ಕೆ ಹಿಂದು.
೩೨೨. ಆಸೆಯೇ ಜೀವನ, ಜೀವನವೇ ಆಸೆ.
೩೨೩. ಎಡವಿದ ಕಾಲೇ ಎಡವುದು ಹೆಚ್ಚು.
೩೨೪. ಸಾವಿಲ್ಲದ ಮನೆಯಿಲ್ಲ, ಸೋಲಿಲ್ಲದ ಮನುಷ್ಯನಿಲ್ಲ.
೩೨೫. ಎಣ್ಣೆ ಬರುವಾಗ ಗಾಣ ಮುರೀತು.
೩೨೬. ಆದರೆ ಹಬ್ಬ, ಇಲ್ಲದಿದ್ದರೆ ಬರಗಾಲ.
೩೨೭. ಗಿಡ ಮೂರು ಮೊಳ, ಕಾಯಿ ಆರು ಮೊಳ.
೩೨೮. ಕಂಚು ಕಡೆಯಲ್ಲ, ಹಂಚು ದ್ರವ್ಯವಲ್ಲ.
೩೨೯. ಭೂಮಿಯಿಂದ ಆಕಾಶಕ್ಕೆ ಏಣಿಯನ್ನು ಇಟ್ಟ.
೩೩೦. ಕಳ್ಳ ಹೊಕ್ಕ ಮನೆಗೆ ಎಣ್ಣೆ ದಂಡ.
೩೩೧. ಅಕ್ಷರ ಕಲಿಯುವುದಕ್ಕೆ ಬೇಧಭಾವ ಬೇಡ.
೩೩೨. ಉರುಳುವ ಕಲ್ಲಿಗೆ ಏನೂ ಅಂಟುವುದಿಲ್ಲ.
೩೩೩. ಪಂಜರದಲ್ಲಿ ಕಾಗೆ ಇಟ್ಟರೆ ಪಂಚಮ ಸ್ವರ ಕೊಟ್ಟೀತೆ?
೩೩೪. ಅಪಾಯ ತೀರಿತು, ದೇವರನ್ನು ಮರೆತಾಯಿತು.
೩೩೫. ಪ್ರೀತಿಗೊಂದು ಮುತ್ತು, ಹಸಿವಿಗೊಂದು ತುತ್ತು.
೩೩೬. ಕತ್ತಿ ಬಂಗಾರದ್ದಾಗಿದೆಯೆಂದು ಕತ್ತು ಕೊಯ್ದುಕೊಳ್ಳಲು ಸಾಧ್ಯವೇ?
೩೩೭. ಎಣ್ಣೆ ಚೆಲ್ಲಿದವನೂ ಅತ್ತ, ಕಾಯಿ ಚೆಲ್ಲಿದವನೂ ಅತ್ತ.
೩೩೮. ಹೊಳೆಗೆ ಸುರಿದರೂ ಅಳೆದು ಸುರಿ ಎಂದಂತೆ.
೩೩೯. ಬಾಳೆಗೊಂದು ಗೊನೆ, ಬಾಳಿಗೊಂದು ಮಾತು.
೩೪೦. ಮಾತು ಆಡಿದರೆ ಮುತ್ತಿನ ಹಾರದಂತಿರಬೇಕು.
೩೪೧. ಮರ ನೆಟ್ಟು ಪಾಪವನ್ನು ಕಳೆದುಕೋ.
೩೪೨. ಅಪ್ಪನ ಮಾತು ಕೇಳದವನು ಅಮ್ಮನ ಮಾತು ಕೇಳಿಯಾನೆ?
೩೪೩. ಮೂರು ವರ್ಷದ ಬುದ್ಧಿ ನೂರು ವರುಷದ ತನಕ.
೩೪೪. ನೀರುಗಣ್ಣಿನ ಹೆಂಗಸು ಊರು ಹಾಳು ಮಾಡಿದಳಂತೆ.
೩೪೫. ಸೆಗಣಿ ಮೇಲೆ ಕಲ್ಲು ಹಾಕಿ, ಮುಖಕ್ಕೆ ಸಿಡಿಸಿಕೊಂಡಂತೆ.
೩೪೬. ಆಸೆ ಆಕಾಶದಷ್ಟು, ಸಾಧನೆ ಸಾಸಿವೆಯಷ್ಟೇ.
೩೪೭. ಇಲಿ ಬೇಟೆಗೆ ತಮಟೆ ಬಡಿದಂಗೆ.
೩೪೮. ಉಳಿ ಸಣ್ಣದಾದರು ಕುಳಿ ತೋಡದೆ ಬಿಡಲಾರದು.
೩೪೯. ಕಡಲೆ ತಿಂದು ಕೈತೊಳೆದ ಹಾಗೆ.
೩೫೦. ಮದುವೆ ಸಂಭ್ರಮದಲ್ಲಿ ತಾಳಿ ಕಟ್ಟುವುದನ್ನೇ ಮರೆತಂತೆ.
೩೫೧. ತುಂಟ ಮಂಟಪಕ್ಕೋದರೂ ತುಂಟತನ ಬಿಡಲಿಲ್ಲ.
೩೫೨. ಹೆಂಡತಿ ಮುಂದಿರಬೇಕು, ಮಗ ಹಿಂದಿರಬೇಕು.
೩೫೩. ಕಜ್ಜಿ ಕೆರೆದಷ್ಟು ಹಿತ, ಚಾಕೂ ಮಸೆದಷ್ಟೂ ಹರಿತ.
೩೫೪. ಕೋಟಿಗೆ ಒಬ್ಬ ಕುಬೇರ, ನೋಟಕ್ಕೆ ಒಬ್ಬ ಸುಂದರ.
೩೫೫. ಜಾತಿ ಜಾತಿಗೆ ವೈರಿ, ನಾಯಿ ನಾಯಿಗೆ ವೈರಿ.
೩೫೬. ಮದುವೆ ಸಾಲ ಮಸಣಾದವರೆಗೂ.
೩೫೭. ನೂಲಿನಂತೆ ಸೀರೆ, ಬೀಜದಂತೆ ವೃಕ್ಷ.
೩೫೮. ಶ್ರೀಮಂತನ ಮನೆ ಸೀಮಂತಕ್ಕೆ ಬಡವ ಬಡಬಡಿಸಿದ ಹಾಗೆ.
೩೫೯. ಮೊಸರು ಇಟ್ಟುಕೊಂಡು ಮಜ್ಜಿಗೆಗೆ ಅತ್ತಹಾಗೆ.
೩೬೦. ಕುಡಿಗೆ ಕುಂಬಳಕಾಯಿ ಭಾರವೇ?
೩೬೧. ಮಾವನು ಇಲ್ಲದ ಮನೆಯೇಕೆ, ಹೆಂಡತಿಯಿಲ್ಲದ ಒಡವೆಯೇಕೆ?
೩೬೨. ಊಟವಿಲ್ಲದ ಉಪದೇಶಿ ಊರಿಗೆಲ್ಲಾ ನಿವಾಸಿ.
೩೬೩. ಸೋಲಿಲ್ಲದ ಸರದಾರನಿಲ್ಲ, ಸಂಗಮವಿಲ್ಲದ ಸಾವಿಲ್ಲ.
೩೬೪. ಪ್ರೇಮಿಗಳಿಲ್ಲದ ನಾಡು ಬರೀ ಶೂನ್ಯದ ಬೀಡು.
೩೬೫. ಆತ್ಮೀಯವಾದ ಪ್ರೇಮ ಅಮರವಾದದ್ದು.
೩೬೬. ಸ್ನೇಹ ಎಂಬ ಸಂಪಿಗೆ ಸುಮಧುರವಾದದ್ದು.
೩೬೭. ತಾಯಿಯ ಪ್ರೀತಿ ಸುಖವಾದದ್ದು, ತಂದೆಯ ಪ್ರೀತಿ ಮಧುರವಾದದ್ದು.
೩೬೮. ಮಮತೆಯ ಮಡಿಲಲ್ಲಿ ತೂಗಬೇಕು, ಮನಸ್ಸೆಂಬ ಬಂಧನದಲ್ಲಿ ಬೀಳಬೇಕು.
೩೬೯. ಸಂಸಾರದಲ್ಲಿ ಸುಖವಿದೆ, ಬಾಳೆಂಬ ಬಂಧನದಲ್ಲಿ ಕಷ್ಟವಿದೆ.
೩೭೦. ತಾಯಿಯನ್ನು ನಿಂದಿಸಬೇಡ, ಒಳ್ಳೆಯವರನ್ನು ಬಂಧಿಸಬೇಡ.
೩೭೧. ಮನಸ್ಸನ್ನು ನಿಯಂತ್ರಿಸಿ ಜೀವನ ಸಾಗಿಸಿ.
೩೭೨. ಮನೆ ಬೆಳಗಲಿ ದೀಪ ಬೇಕು, ಮಾನವ ಬೆಳಗಲು ಅಕ್ಷರ ಬೇಕು.
೩೭೩. ಕತ್ತೆಗೆ ತಿಪ್ಪೆಯೇ ತವರುಮನೆ.
೩೭೪. ಕತ್ತೆಗೆ ಯಾಕೆ ಹತ್ತಿಕಾಳು?
೩೭೫. ಸಣ್ಣದಿರುವಾಗ ಕತ್ತೆಯೂ ಬಹಳ ಸುಂದರ.
೩೭೬. ಕತ್ತೆಯಾಗಬೇಡ ಕಾಗೆಯಾಗು.
೩೭೭. ಕತ್ತೆಯ ಹಿಂದೆ ಹೋಳಿಹುಣ್ಣಿಮೆಯಲ್ಲಿ ಮಾತ್ರ ಹೋಗು.
೩೭೮. ಅಪದ್ದಕ್ಕೆ ಅಪ್ಪಣೆ ಕೊಟ್ರೆ ಬಾಯಿಗೆ ಬಂದದ್ದೇ ಮಾತು.
೩೭೯. ಅಪ್ಪ ಮಾಡಿದ ಪುಣ್ಯ ಮಕ್ಕಳ ಕಾಲಕ್ಕೆ.
೩೮೦. ಅಪ್ಪನ ಸಾಲಕ್ಕೆ ಮಗನನ್ನು ತಿಪ್ಪೆ ಮೇಲೆ ಎಳೆದರು.
೩೮೧. ಅರಿತರೆ ಮಾತನಾಡು, ಮರೆತರೆ ಕೂತು ನೋಡು.
೩೮೨. ಆಕಾಶ ನೋಡೋಕೆ ನೂಕಾಟವೇಕೆ?
೩೮೩. ಗುರುಕೊಟ್ಟ ಜೋಳಿಗೆ ಅಂತ ಗೂಟಕ್ಕೆ ಹಾಕಿದರೆ ಊಟ ಹಾಕೀತೆ?
೩೮೪. ಜಾರುವುದು ತಪ್ಪಿದರೆ ಏರುವುದು ಸಾಧ್ಯ.
೩೮೫. ಧೂಳಿ ಧೂಪವಾದೀತೆ, ಮಾಳಿಗೆ ಸ್ವರ್ಗವಾದೀತೆ?
೩೮೬. ಬಾಳೆಂಬ ಬಂಧನದಲ್ಲಿ ಈಜಬೇಕು, ಸಂಸಾರ ಎಂಬ ಸಾಗರದಲ್ಲಿ ತೇಲಬೇಕು.
೩೮೭. ಹೆಸರು ಸಂಪತ್ತು, ಕೂಳಿಗಿಲ್ಲ ಒಪ್ಪತ್ತು.
೩೮೮. ನೇಯುವ ಕಾಲ ತಪ್ಪಿದರೂ, ಸಾಯುವ ಕಾಲ ತಪ್ಪದು.
೩೮೯. ಕೀಳನ ಕೆಣಕಬೇಡ, ಮೇಗಾಲು ತುರಿಸಬೇಡ.
೩೯೦. ಹೊಟ್ಟೆ ತುಂಬಿದ ಮೇಲೆ ಕಜ್ಜಾಯವೂ ವಿಷ
೩೯೧. ದೇವರನ್ನು ಬಯ್ಯುವವರು ಅರ್ಚಕನನ್ನು ಬಿಟ್ಟಾರೆ?

ಕೃಪೆ: http://www.kannadakavi.com