Dec 23, 2016

ಅನ್ನದ ಮಹತ್ವ

*ರತನ್ ಟಾಟಾ* ಹೇಳಿದ
“ *ಊಟದ ಸ್ಟೋರಿ*”:
ವಿಶ್ವದ ಶ್ರೀಮಂತ ಉಧ್ಯಮಿಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಭಾರತದ ರತನ್ ಟಾಟಾ ಜರ್ಮನಿಯಲ್ಲಿ  ತಮಗೆ ಎದುರಾದ ಒಂದು ಸನ್ನಿವೇಶವನ್ನ ಹಂಚಿಕೊಂಡಿದ್ದಾರೆ.
ಒಂದು ಸಾರಿ ನಾವು ಜರ್ಮನಿಗೆ ಹೊಗಿದ್ದೆವು.
ಅದು ಪ್ರಪಂಚದ ಅಭಿವೃದ್ಧಿ ದೇಶಗಳಲ್ಲಿ ಒಂದು.
ಹಂಬರ್ಗ್ ನಲ್ಲಿ  ಊಟ ಮಾಡಲು ಅಲ್ಲಿನ ಹೋಟೆಲ್’ಗೆ ಹೋದೆವು.
ಬಹಳ ಟೇಬಲ್ ಖಾಲಿ ಇವೆ.
ನಮಗೆ ಆಶ್ಚರ್ಯವಾಯಿತು.
ಅಲ್ಲಿ ಎಲ್ಲರೂ ಒಂದು-ಎರಡು ಊಟ ತರಿಸಿಕೊಂಡು ಪ್ಲೇಟ್ ಪೂರ್ತಿ ಖಾಲಿ ಮಾಡಿ ಹೋಗುತ್ತಿದ್ದಾರೆ.
ಒಂದು ಮೂಲೆಯ ಟೇಬಲ್ ನಲ್ಲಿ ವೃದ್ಧರು ಒಂದೇ ಊಟ ತರಿಸಿಕೊಂಡು ಅದನ್ನು ಎಲ್ಲರೂ ಹಂಚಿಕೊಂಡು ತಿನ್ನುತ್ತಿದ್ದರು.
ನಮಗೆ ಶ್ರೀಮಂತ ದೇಶದಲ್ಲಿ ಹೀಗೆ ತಿನ್ನುತ್ತಿದ್ದರಲ್ಲ ಎನ್ನಿಸಿತು.
ನಾವು ನಮ್ಮ ಸ್ಟೇಟಸ್ ಗೆ ತಕ್ಕಂತೆ ತರತರದ ತಿನಿಸುಗಳನ್ನು ತರಿಸಿಕೊಂಡು ತಿಂದೆವು.
ನಮ್ಮವರು ಕೆಲವು ತಿನಿಸುಗಳು ಇಷ್ಟವಾಲಿಲ್ಲವೆಂದು,
ಜಾಸ್ತಿ ಆಯಿತೆಂದು ಆಹಾರವನ್ನು ಪ್ಲೇಟ್ ನಲ್ಲಿಯೇ ಬಿಟ್ಟರು.!!
ನಾವು ಅಲ್ಲಿಂದ ಹೊರಡುವ ಸಮಯದಲ್ಲಿ ವೃದ್ಧ ಮಹಿಳೆಯೊಬ್ಬರು ನಮ್ಮ ಬಳಿ ಬಂದು ಹಾಗೆ ವೆಸ್ಟ್ ಮಾಡಬಾರದು ಅದು ನಮ್ಮ ಆಹಾರ ಎಂದಳು.!!
ನಮ್ಮವರು ಅದು ನಮ್ಮಿಷ್ಟ ಎಂದರು. ತಕ್ಷಣ ಪೋನ್ ತೆಗೆದು ಆಕೆ ಯಾರಿಗೋ ಪೋನ್ ಮಾಡಿದಳು.!!
ಪೊಲೀಸರು ಬಂದರು.!!!!
ನಡೆದಿದ್ದನ್ನು ಕೇಳಿದರು.
ನಮಗೆ 50 ಯೂರೋ ದಂಡ ಹಾಕಿದರು. ಮರುಮಾತನಾಡದೇ ಕಟ್ಟಿ ಬಂದೆವು.
ಅವರು ಹೇಳಿದರು
"ಹಣ ನಿಮ್ಮದು ಅಷ್ಟೇ,
ಇಲ್ಲಿಯ ಸಂಪನ್ಮೂಲಗಳಲ್ಲ.!!
ಇನ್ನೊಬ್ಬರು ತಿನ್ನುವುದನ್ನು ನೀವು ಹಾಳು ಮಾಡಿದ್ದೀರಿ.!!
ಆಮೂಲಕ ನೀವು ನಮ್ಮ ದೇಶದ ಸಂಪತ್ತನ್ನು ನಷ್ಟ ಮಾಡಿದ್ದೀರಿ.!!!
ದೇಶದ ಸಂಪತ್ತನ್ನು ನಷ್ಟ ಮಾಡುವ ಹಕ್ಕು ನಿಮಗಿಲ್ಲ.!!!"
ಇದು ನಮಗೆ ಒಂದು ಗುಣಪಾಠವಲ್ಲವೇ…?
“ *MONEY* *IS* *YOURS*
*BUT RESOURCES BELONGS TO THE SOCIETY*”

Dec 20, 2016

ಗ್ರಾಮದೇವತೆ ಹಿರಿಯಮ್ಮ ದೇವಿ, ಮಾಕಳಿ ಗ್ರಾಮ


ಗ್ರಾಮದೇವತೆ ಹಿರಿಯಮ್ಮ ದೇವಿ, ಮಾಕಳಿ ಗ್ರಾಮ


ಮಾಕಳಿ ಗ್ರಾಮದ ಹಿರಿಯಮ್ಮ ದೇವಿ

ಮಾಕಳಿ ಗ್ರಾಮದ ಹಿರಿಯಮ್ಮ ದೇವಿ


ಮಾಕಳಿ ಗ್ರಾಮದ ಹಿರಿಯಮ್ಮ ದೇವಿ
ಮಾಕಳಿ ಗ್ರಾಮದ ಹಿರಿಯಮ್ಮ ದೇವಿ

Dec 14, 2016

ಕಾಲ ಬದಲಾದಾಗ

ಕಾಲ ಯಾವಾಗ ಬದಲಾಯಿತೊ ಗೊತ್ತೇ ಆಗಲಿಲ್ಲ 🕐🕜🕤🕧

*ಮನೆ ಮಂದಿಯೆಲ್ಲಾ  ಒಂದೇ ಸಾಬೂನು ಉಪಯೋಗಿಸುತ್ತಿದ್ವಿ*

*ದೂರದರ್ಶನದಲ್ಲಿ ಭಾನುವಾರ ಸಂಜೆ ನಾಲ್ಕಕ್ಕೆ ಬರುತ್ತಿದ್ದ ಚಲನಚಿತ್ರ ನೋಡೋದೇ ಖುಷಿ*

*ಶೆಟ್ರಂಗಡಿಗೆ ಚೀಟಿ ಕೊಟ್ಟು ಸಾಮಾನು ತರುತ್ತಿದ್ದೆವು*

*ಯಾವತ್ತೊ ಒಂದು ದಿನ ಮಾಡುತ್ತಿದ್ದ   ಹೋಳಿ ಪದಾರ್ಥಕ್ಕೆ ಈಗ ಆ ರುಚಿ ಇಲ್ಲ*

*ಬೆಲ್ಲ ಕ್ಯಾಂಡಿ ತಿನ್ನೊದು ಯಾವಾಗ ನಿಲ್ಲಿಸಿದೆವು*

*ಅಪ್ಪ ತರುತ್ತಿದ್ದ ಬಟ್ಟೆಯ ಸಂಭ್ರಮ ಇವತ್ತಿನ ಮಾಲ್ ನಲ್ಲಿ ಸಿಗುತ್ತಿಲ್ಲ*

*ಕಾದಂಬರಿ ಓದೋರ ಒಂದು ಬಳಗವೇ ಇರುತ್ತಿತ್ತು*

*ಊರ ಜಾತ್ರೆಗಿಂತ ದೊಡ್ಡ ಪ್ರೋಗ್ರಾಮ ಇರಲೇ ಇಲ್ಲ*

*ಎಲ್ಲಾ ಧರ್ಮದವರು ಒಟ್ಟಿಗೆ ಹಬ್ಬ ಆಚರಿಸ್ತಾ ಇದ್ದೆವು*

*ಜ್ವರಕ್ಕೆ ಅಮ್ಮನ ಕಾಫಿ/ಕಷಾಯ ಸಾಕಾಗ್ತಾ ಇತ್ತು*

*ಕಿವಿ ನೋವು, ಹೊಟ್ಟೆ ನೋವು, ಶೀತ, ಕೆಮ್ಮು, ಗಂಟಲು ನೋವು ಖಯಿಲೆ ಅಂದ್ರೆ ಇವಷ್ಟೆ ಆಗಿತ್ತು*

*ಸಕ್ಕರೆ ಖಯಿಲೆ ಅವಾಗ ಶ್ರೀಮಂತರಿಗೆ ಮಾತ್ರ*

*ಬಿಲ್ಡಿಂಗಿಗಿಂತ ಮರಗಳೇ ಜಾಸ್ತಿ ಇದ್ದವು*

*ಲಗೋರಿ, ಗೋಲಿ, ಕ್ರಿಕೆಟ್ ಫೇಮಸ್ ಆಗಿತ್ತು*

*ಭೂತದ ಮನೆ, ಭೂತ ಬಂಗ್ಲೆ ಊರಿಗೊಂದು ಇರುತ್ತಿತ್ತು*

*ಸಂಜೆ ಏಳಕ್ಕೆ ಎಲ್ಲಾ ಮನೆಲಿ ಇರುತ್ತಿದ್ವಿ*

*5 ಪೈಸೆಗೆ ಚಾಕ್ಲೆಟ್ ಸಿಗ್ತಾ ಇತ್ತು. ದೊಡ್ಡ ಚಾಕ್ಲೇಟ್ ಅಂದರೆ 2 ರೂಪಾಯಿ ಕಿಸ್ ಮಿ ಬಾರ್ ಚಾಕ್ಲೇಟ್*

*ಆದಿತ್ಯವಾರ ಕೂದಲು ಕಟ್ಟಿಂಗೆ ಲೈನ್ ಕಾಯ್ತಾ ಇದ್ದೆವು*

*ಹುಡುಗೀರಿಗೆ ಅಮ್ಮನದ್ದೆ ಬ್ಯೂಟಿ ಪಾರ್ಲರ್*

*ದೊಡ್ಡೋರ ಅಂಗಿ ಸಣ್ಣವರಿಗೆ ಬಳುವಳಿಯಾಗಿ ಬರುತ್ತಿತ್ತು*

*ಮಳೆ ಬೆಳಗ್ಗೆ ಶಾಲೆಗೆ ಹೋಗುವಾಗ ಮತ್ತು ಸಂಜೆ ಬರುವಾಗ ಜೋರಾಗಿ ಹೊಡಿತ್ತಿತ್ತು  ಆಮೇಲೆ ದಿನ ಇಡೀ ಜಿಟಿಜಿಟಿ ಸುರಿತಾ ಇತ್ತು*

*ಮಗ್ಗಿ ಹೇಳೊದೆ ದೊಡ್ಡ ಅಸೈನ್ಮಂಟು*

*ಗುಬ್ಬಿ ಮನೆ ಅಂಗಳದಲ್ಲೇ, ಸಂಜೆ ಆದ್ರೆ ಬೇರೆ ಬೇರೆ ಸದ್ದಿನ ಹಕ್ಕಿಗಳು*

*ಟ್ರಾಫಿಕ್ ಜಾಮ್ ಕೇಳಿ ಗೊತ್ತಿತ್ತು ನೋಡಿ ಗೊತ್ತಿರಲಿಲ್ಲ*

*ತರಕಾರಿ ತರೋದಕ್ಕೆ ಕೈ ಚೀಲ ನಾವೆ ತಗೊಂಡು ಹೊಗ್ತಾ ಇದ್ದೆವು*

*ನೆಲದಲ್ಲಿ ಡಿಪ್ಸ್ ತಗಿಯೋದೆ ದೊಡ್ಡ ಜಿಮ್ ಆಗಿತ್ತು*

*ಯಾರಿಗಾದರು ನೋವಾದರೆ ನಮಗೂ ದುಃಖ ಆಗ್ತಾ ಇತ್ತು, ಸ್ಮಯ್ಲಿ/ಇಮೊಜಿ ಕಳುಹಿಸುತ್ತಾ ಇರ್ಲಿಲ್ಲ*

*ಮನೆಮಂದಿ ಒಟ್ಟಿಗೆ ಕೂತು ಮಾತಾಡೋದೆ ವಾಟ್ಸಪ್ ಗ್ರೂಪ್ ಆಗಿತ್ತು*

*ಫೋಟೊ ತೆಗೆದ್ರೆ ಕ್ಲೀನ್ ಆಗಿ ಬರೋಕೆ ಕಾಯ್ತಾ ಇದ್ದೆವು*

*ಪೇಪರಿನಲ್ಲಿ ಅಪಘಾತದಂತ ಸುದ್ದಿ ಬಂದ್ರೆ ಮರುಗುತ್ತಿದ್ದವು*

*ಒಬ್ರು ಯಾರೊ ಫೇಸ್ ಬುಕ್ ತರ ಎಲ್ಲಾ ವಿಷಯ ಮನೆಗೆ ಬಂದು ಅಪ್ಲೋಡ್ ಮಾಡ್ತಾ ಇದ್ದರು/ ಅದೆ ಮನೆಯಿಂದ ವಿಷಯ ಡಾವ್ನ್ಲೋಡ್ ಕೂಡ ಮಾಡ್ತ ಇದ್ರು*

*ಅಂಗಡಿ ಶೆಟ್ರಿಗೆ, ಊರ ಡಾಕ್ಟ್ರಿಗೆ, ಶಾಲಾ ಮಾಸ್ತರಿಗೆ ಮನೆಯವರೆಲ್ಲರ ಪರಿಚಯ ಮತ್ತು ವಿಷಯ ತಿಳಿದಿತ್ತು*

ಕಾಲ ಬದಲಾಗಿದ್ದು ಗೊತ್ತೇ ಆಗ್ಲಿಲ್ಲ... ಆದರೆ ನೆನಪುಗಳು ಇನ್ನೂ ಡಿಲೀಟ್ ಆಗಿಲ್ಲ...

Dec 6, 2016

ಭಾರತದ ಚಿನ್ಹೆಗಳು



 1} ‪#‎ರಾಷ್ಟ್ರಧ್ವಜ‬
=> ಭಾರತದ ರಾಷ್ಟ್ರ ಧ್ವಜದ ಉದ್ದ & ಅಗಲದ ಅನುಪಾತ 3:2
=> ಭಾರತದ ರಾಷ್ಟ್ರಧ್ವಜದ ಬಣ್ಣ ಕೆಸರಿ,ಬಿಳಿ,ಹಸಿರು ಹೊಂದಿದೆ
=> ಭಾರತದ ರಾಷ್ಟ್ರಧ್ವಜದ ಮಧ್ಯಭಾಗದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಅಶೋಕನು ಹೊರಡಿಸಿದ ಸಾರನಾಥ ಸೂಪ್ತದಿಂದ ಪಡೆದಿರುವ ಧರ್ಮ ಚಕ್ರವಿದೆ.ಇದು ನಿಲಿ ಬಣ್ಣದಿಂದ ಕೂಡಿದೆ.
=> ಭಾರತದ ಸಂವಿಧಾನ ರಚನಾ ಸಭೆಯು 22 ಜುಲೈ 1947 ರಲ್ಲಿ ರಾಷ್ಟ್ರಧ್ವಜವನ್ನು ಅಳವಡಿಸಿಕೊಂಡಿತು.
=> ಭಾರತದ ಧ್ವಜಸಂಹಿತೆ(flag code) 26 ಜನೆವರಿ 2002 ರಂದು ಜಾರಿಗೆ ಬಂದಿತು.
=> ಭಾರತದ ಪ್ರತಿಯೊಬ್ಬ ರಾಷ್ಟ್ರಧ್ವಜ ಹಾರಿಸುವುದು ಮೂಲಭೂತ ಹಕ್ಕು ಎಂದು ಕಲಂ 19(i) ವಿವರಿಸುವುದು.
=> ಭಾರತದ ತ್ರಿವರ್ಣ ಧ್ವಜವನ್ನು ಮೊಟ್ಟಮೊದಲಿಗೆ ತಯಾರಿಸಿದವರು ಮೇಡಂ ಭೀಕಾಜಿ ಕಾಮಾ.
=> ಭಾರತದ ಧ್ವಜವನ್ನು ಮೊದಲಿಗೆ ಲಾಹೋರದ ರಾವಿ ನದಿಯ ದಂಡೆ ಮೇಲೆ 1928 ರ ಕಾಂಗ್ರೆಸ್ಸ ಅಧಿವೇಶನದಲ್ಲಿ ಜವಾಹರಲಾಲ ನೆಹರೂ ಹಾರಿಸಿದರು.
=> ಕೆಂಪು ಕೋಟೆಯ ಮೇಲೆ ಪ್ರತಿ ವರ್ಷ ರಾಷ್ಟ್ರೀಯ ಧ್ವಜ ಹಾರಿಸುವವರು ಪ್ರಧಾನಮಂತ್ರಿಗಳು
=> ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ.
=> ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.
2} ‪#‎ರಾಷ್ಟ್ರೀಯ_ಚಿನ್ಹೆ‬
=> ಭಾರತದ ರಾಷ್ಟ್ರೀಯ ಚಿನ್ಹೆಯನ್ನು ಉತ್ತರ ಪ್ರದೇಶದಲ್ಲಿ ಅಶೋಕನು ಹೊರಡಿಸಿರುವ ಸಾರನಾಥ ಸೂಪ್ತದಿಂದ ಪಡೆಯಲಾಗಿದೆ.
=> ಇದರಲ್ಲಿ ನಾಲ್ಕು ಸಿಂಹಗಳು, ನೆಗೆಯುತ್ತಿರುವ ಕುದುರೆ, ಗೂಳಿ & ಆನೆಗಳಿವೆ. ಮಧ್ಯದಲ್ಲಿ ಧರ್ಮಚಕ್ರವಿದೆ.
=> ಭಾರತ ಸರ್ಕಾರವು ಇದನ್ನು 26 ಜನೆವರಿ 1950 ರಂದು ಅಳವಡಿಸಿಕೊಂಡಿತು.
=> ಇದರ ಕೆಳಗೆ ಮಂಡಕೊಪನಿಷತ್ತಿನಿಂದ ಪಡೆದಿರುವ ಸತ್ಯಮೇವ ಜಯತೇ ಯನ್ನು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ.
=> ರಾಷ್ಟ್ರೀಯ ಚಿನ್ಹೆಯು ಭಾರತದ ಸರ್ಕಾರದ ಹಕ್ಕನ್ನು ಸೂಚಿಸುವುದು.
3} ‪#‎ರಾಷ್ಟ್ರೀಯ_ಹೂವು‬
=> ಭಾರತದ ಪುಷ್ಪ - ಕಮಲದ ಹೂವು
=> ಪುರಾಣಗಳಲ್ಲಿ ಕಮಲದ ಹೂ ತ್ಯಾಗದ ಸಂಕೇತವಾಗಿದೆ.
=> ಕಮಲದ ವೈಜ್ಞಾನಿಕ ಹೆಸರು - ನೀಲುಂಬಾ ನುಸಿಫೇರಾ(Nelumbo nucifera)
=> ಸಸ್ಯ ಸಂಪತ್ತಿನಲ್ಲಿ ಭಾರತ ಜಗತ್ತಿನಲ್ಲಿ 10 ನೇ ಸ್ಥಾನದಲ್ಲಿದೆ.
4} ‪#‎ರಾಷ್ಟ್ರಗೀತೆ‬
=> ಭಾರತದ ರಾಷ್ಟ್ರಗೀತೆ 'ಜನಗಣಮನ"
=> ಮೂಲತ ಇದು ಬಂಗಾಳಿ ಭಾಷೆಯಲ್ಲಿದ್ದು ಇದನ್ನು ರಚಿಸಿದವರು ರವೀಂದ್ರನಾಥ ಟ್ಯಾಗೋರ್
=> ಸಂವಿಧಾನ ರಚನಾ ಸಭೆಯು ಹಿಂದಿ ಭಾಷಾಂತರದ ರಾಷ್ಟ್ರಗೀತೆಯನ್ನು 24 ಜನೆವರಿ 1950 ರಂದು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿತು.
=> ಈ ಗೀತೆಯನ್ನು ಮೊದಲಿಗೆ 1911 ರ ಕಲ್ಕತ್ತಾ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು.
=> ಜನಮಣ ಗೀತೆಯು ಮೂಲತಃ ಐದು ಪಂಕ್ತಿಗಳಿಂದ ಕೂಡಿದೆ ಅದರ ಮೊದಲನೇ ಪಂಕ್ತಿಯನ್ನು ಮಾತ್ರ ರಾಷ್ಟ್ರಗೀತೆಯಾಗಿ ಅಳವಡಿಸಕ್ಕೊಳ್ಳಲಾಗಿದೆ.
=> ಭಾರತದ ರಾಷ್ಟ್ರಗೀತೆಯಲ್ಲಿ ಒಟ್ಟು 13 ಸಾಲುಗಳಿವೆ.
=> ರಾಷ್ಟ್ರಗೀತೆಯನ್ನು 48 ಸೆಕೆಂಡುಗಳಿಗೆ ಕಡಿಮೆ ಇಲ್ಲದಂತೆ ಹಾಗೂ 52 ಸೆಕೆಂಡುಗಳು ಮೀರದಂತೆ ಹಾಡುವ ನಿಯಮವಿದೆ.
=> ರವೀಂದ್ರನಾಥ ಟ್ಯಾಗೋರ್ ರವರ 'ಅಮರ್ ಸೋನಾರ್ ಬಾಂಗ್ಲಾ' ಗೀತೆಯನ್ನು ಬಾಂಗ್ಲಾದೇಶ ತನ್ನ ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿದೆ( ಈ ಗೀತೆಯನ್ನು 1905 ರಲ್ಲಿ ಬಂಗಾಳ ವಿಭಜನೆ ವಿರೋಧಿಸಿ ರಚಿಸಿದ್ದರು)
=> 1905 ರ ಬಂಗಾಳ ವಿಭಜನೆ ವಿರೋಧಿಸಿ ಇವರು ಹಿಂದೂ ಮುಸ್ಲಿಂರಿಗೆ "ರಕ್ಷಾಬಂಧನ" ಆಚರಿಸುವಂತೆ ಕರೆ ನೀಡಿದ್ದರು.
5} ‪#‎ರಾಷ್ಟ್ರೀಯ_ಹಾಡು‬
=> ಸಂಸ್ಕ್ರತದಲ್ಲಿರುವ ವಂದೇ ಮಾತರಂ ಈ ಗೀತೆಯನ್ನು ಭಾರತದ ಸಂವಿಧಾನ ರಚನಾ ಸಭೇಯನ್ನು ಜನೆವರಿ 24 1950 ರಂದು ಅಳವಡಿಸಿಕೊಂಡಿತು.
=> ಈ ಗೀತೆಯನ್ನು ಬಂಕೀಮಚಂದ್ರ ಚಟರ್ಜಿ ಚಟ್ಟೋಪಧ್ಯಾಯರು 1882 ರಲ್ಲಿ ರಚಿಸಿದ 'ಆನಂದಮಠ' ಕಾದಂಬರಿಯಿಂದ ಆಯ್ದುಕ್ಕೊಳ್ಳಲಾಗಿದೆ.
=> ಈ ಗೀತೆಯನ್ನು ಮೊಟ್ಟಮೊದಲಿಗೆ 1896 ರ ಕಲ್ಕತ್ತಾ ಕಾಂಗ್ರೆಸ್ಸ ಅಧಿವೇಶನದಲ್ಲಿ ಹಾಡಲಾಯಿತು.
=> ಭಾರತಕ್ಕೆ ಸ್ವಾತಂತ್ರ ದೊರೆಯವರೆಗೂ ಈ ಗೀತೆಯನ್ನು ರಾಷ್ಟ್ರಗೀತೆಯಾಗಿ ಹಾಡಲಾಗುತ್ತಿತ್ತು.
=> ಈ ಗೀತೆಯನ್ನು 1920 ರಲ್ಲಿ ಇಂಗ್ಲೀಷ ಭಾಷೆಗೆ ಭಾಷಾಂತರಿಸಿದವರು ಶ್ರೀಅರವಿಂದೋ ಘೋಷ್.
6} ‪#‎ರಾಷ್ಟ್ರೀಯ_ಪಂಚಾಂಗ‬
=> ರಾಷ್ಟ್ರೀಯ ಪಂಚಾಂಗವು ಶಕ ವರ್ಷವನ್ನು ಆಧರಿಸಿದ ಗ್ರೇಗೋರಿಯನ್ನ ಪಂಚಾಂಗವನ್ನು ಹೋಲುತ್ತದೆ.
=> ಇದನ್ನು ಮಾರ್ಚ 22, 1957 ರಂದು ಅವಡಿಸಿಕ್ಕೊಳಲಾಗಿದೆ.
=> ಸಾಮಾನ್ಯ ವರ್ಷದ ಮೊದಲ ದಿನಾಂಕ - ಮಾರ್ಚ 21
=> ಅಧಿಕ ವರ್ಷದ ಮೊದಲ ದಿನಾಂಕ - ಮಾರ್ಚ 22
=> ಕ್ರಿ.ಶ 78 ಶಾಲಿವಾನ ಶಕೆ ವರ್ಷವನ್ನು ಕುಶಾನರ ಅರಸ ಕನಿಷ್ಕನು ಅಧಿಕಾರಕ್ಕೆ ಬಂದಿರುವದರ ನೆನಪಿಗಾಗಿ ಜಾರಿಗೆ ತಂದನು.
=> 2015 ರ ವರ್ಷವನ್ನು ಭಾರತೀಯ ಕ್ಯಾಲೆಂಡರನಂತೆ 1937 ನೇ ವರ್ಷ ಎನ್ನಲಾಗುವುದು.
=> ಭಾರತದ ರಾಷ್ಟ್ರೀಯ ಪಂಚಾಂಗದ ಪ್ರಕಾರ ಮೊದಲನೇ ತಿಂಗಳು - ಚೈತ್ರ
=> ಕೊನೆಯ ತಿಂಗಳು - ಫಾಲ್ಗುಣ
=> ರಾಷ್ಟ್ರೀಯ ಪಂಚಾಂಗದ ತಿಂಗಳುಗಳು : ಚೈತ್ರ ವೈಶಾಖ ಜೇಷ್ಟ ಆಶಾಢ ಶ್ರಾವಣ ಭಾದ್ರಪದ ಅಶ್ವಿನ್ ಕಾರ್ತಿಕ ಮೃಗಶಿರ ಪುಷ್ಯ ಮಾಘ ಫಾಲ್ಗುಣ
7} ‪#‎ರಾಷ್ಟ್ರೀಯ_ಕ್ರೀಡೆ‬
=> ಭಾರತದ ರಾಷ್ಟ್ರೀಯ ಕ್ರೀಡೆ - ಹಾಕಿ
=> ಹಾಕಿ ಕ್ರೀಡೆಯಲ್ಲಿ ಒಂದು ತಂಡದಲ್ಲಿ ಒಟ್ಟು 11 ಆಟಗಾರರಿರುತ್ತಾರೆ.
=> ಭಾರತ ಹಾಕಿ ತಂಡ ಒಟ್ಟು 08 ಸಲ ಓಲಂಪಿಕ್ಸನಲ್ಲಿ ಚಿನ್ನದ ಪದಕ ಗೆದ್ದಿದೆ.
=> ಕರ್ನಾಟಕದ ಕೊಡಗು ಜಿಲ್ಲೆಗೆ ಹಾಕಿಯ ತವರೂರು ಎನ್ನುತ್ತಾರೆ.
=> ಭಾರತದ ಹಾಕಿಯ ಮಾಂತ್ರಿಕ - ಧ್ಯಾನಚಂದ್
=> ಧ್ಯಾನಚಂದರವರ ಹುಟ್ಟು ಹಬ್ಬದ ದಿನವಾದ ಅಗಷ್ಟ್ -29 ನ್ನು ಪ್ರತಿವರ್ಷ ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸುವರು.
=> ಕರ್ನಾಟಕದ ರಾಷ್ಟ್ರೀಯ ಕ್ರೀಡೆ ಸಹ ಹಾಕಿ ಆಗಿದೆ.
=> ಇಂದಿರಾಗಾಂಧಿ ಗೋಲ್ಡ್ ಕಪ್ ಭಾರತದ ಪ್ರಮುಖ ಹಾಕಿ ಕ್ರೀಡೆಯ ಟ್ರೋಫಿಯಾಗಿದೆ.
=> ಅಂತರರಾಷ್ಟ್ರೀಯ ಹಾಕಿ ಪಂದ್ಯವೊಂದರ ಅವಧಿ - 70 ನಿಮಿಷಗಳು.
8} ‪#‎ರಾಷ್ಟ್ರೀಯ_ನದಿ‬
=> ಭಾರತದ ರಾಷ್ಟ್ರೀಯ ನದಿ - ಗಂಗಾನದಿ
=> ನವೆಂಬರ್ 04, 2008 ರಂದು ಗಂಗಾನದಿಯನ್ನು ಭಾರತದ ರಾಷ್ಟ್ರೀಯ ನದಿಯನ್ನು ಪ್ರಧಾನಮಂತ್ರಿಗಳು ಘೋಷಿಸಿದರು.
=> ಭಾರತದಲ್ಲಿ ಹರಿಯುವ ನದಿಗಳಲ್ಲಿ ಗಂಗಾ ನದಿ ಅತಿ ಉದ್ದವಾಗಿದೆ(2510 km)
=> ಗಂಗಾ ನದಿ ಪ್ರಾಧಿಕಾರ ಸಂಸ್ಥೆ ಇರುವುದು ಬಿಹಾರದ ಪಾಟ್ನಾದಲ್ಲಿ.
9} ‪#‎ರಾಷ್ಟ್ರೀಯ_ಜಲಪ್ರಾಣಿ‬
=> ಭಾರತ ಸರ್ಕಾರವು ಅಕ್ಟೋಬರ್ 05,2009 ರಂದು ಗಂಗಾ ನದಿಯ ಡಾಲ್ಫಿನ್ ಭಾರತದ ರಾಷ್ಟ್ರೀಯ ಜಲಪ್ರಾಣಿ ಎಂದು ಘೋಷಿಸಿದೆ.
=> ಡಾಲ್ಫಿನದ ವೈಜ್ಞಾನಿಕ ಹೆಸರು - ಪ್ಲಾಂಟಾನಿಷ್ಟಾ ಗ್ಯಾಂಗ್ಯಾಟಿಕಾ.((Platanista gangetica)
10} ‪#‎ರಾಷ್ಟ್ರೀಯ_ಪಕ್ಷಿ‬
=> ಭಾರತದ ರಾಷ್ಟ್ರೀಯ ಪಕ್ಷಿ - ನವಿಲು
=> ಭಾರತದ ವನ್ಯಜೀವಿ ರಕ್ಷಣಾ ಕಾಯ್ದೆ - 1972 ರ ಅಡಿಯಲ್ಲಿ ನವಿಲು ಸಂರಕ್ಷಿಸಲಾಗುವುದು.
=> ನವಿಲಿನ ವೈಜ್ಞಾನಿಕ ಹೆಸರು - ಪಾವೋ ಕ್ರಿಸ್ಟಾಟಸ್ (pavo cristatus)
=> ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಹಾಗೂ ಹಾವೇರಿ ಜಿಲ್ಲೆಯ ಬಂಕಾಪೂರದಲ್ಲಿ ನವಿಲು ವನ್ಯಧಾಮಗಳಿವೆ.
11} ‪#‎ರಾಷ್ಟ್ರೀಯ_ಮರ‬
=> ಭಾರತದ ರಾಷ್ಟ್ರೀಯ ಮರ - ಬನಯಾನ್ ಅಥವಾ ಅರಳಿ ಮರ.
=> ಅರಳಿ ಮರದ ವೈಜ್ಞಾನಿಕ ಹೆಸರು - ಫೈಕಾಸ್ ಬೆಂಗಾಲೆನಿಸ್ (ficus benghalensis)
=> ಅರಳಿ ಮರದ ಬೇರುಗಳು ತಂತುರೂಪಗಳಾಗಿವೆ.
=> ಗೌತನ ಬುದ್ದನಿಗೆ ಜ್ಞಾನೋದಯವಾದದ್ದು ಬಿಹಾರದ ಗಯಾದ ನಿರಂಜನ ನದಿಯ ದಡದಲ್ಲಿರುವ ಅರಳಿ ಮರದ ಕೆಳಗೆ.
=> ಗೌತಮ ಬುದ್ದನ ಆಧ್ಯಾತ್ಮಿಕ ಗುರು - ಅಲಾರ ಕಮಾ
=> ಭಾರತದ ಅತ್ಯಂತ ದೊಡ್ಡ ಅರಳಿ ಇರುವುದು - ಕಲ್ಕತ್ತದಲ್ಲಿ.
=> ಪ್ರಪಂಚದ ಅತಿ ದೊಡ್ಡ ವೃಕ್ಷ - ದೈತ್ಯ ಸಿಕೋಯ್ ಮರ.
=> ಮರಗಳ ಆಯುಷ್ಯವನ್ನು ನಿರ್ಧರಿಸುವುದು ಅವುಗಳು ಕಾಂಡದಲ್ಲಿರುವ ಸೆಲ್ಯುಲಸನಿಂದ ಮಾಡಲ್ಪಟ್ಟಿರುವ ವೃತ್ತಗಳ ಸಂಖ್ಯೆಯ ಆಧಾರದ ಮೇಲೆ.
12} ‪#‎ರಾಷ್ಟ್ರೀಯ_ಹಣ್ಣು‬
=> ಭಾರತದ ರಾಷ್ಟ್ರೀಯ ಹಣ್ಣು - ಮಾವಿನ ಹಣ್ಣು
=> ಮಾವಿನ ವೈಜ್ಞಾನಿಕ ಹೆಸರು - ಮ್ಯಾಂಜಿಫೇರಾ ಇಂಡಿಕಾ (mangifera indica)
=> ಮಾವಿ ಹಣ್ಣಿನಲ್ಲಿರುವ ಜೀವಸತ್ವಗಳು - A,C,D
=> ಭಾರತವು ಮಾವಿನ ಉತ್ಪಾದನೆಯಲ್ಲಿ ಜಗತ್ತಿನಲ್ಲಿ ಪ್ರಥಮ ಸ್ಥಾನದಲ್ಲಿದೆ.
13} ‪#‎ರಾಷ್ಟ್ರೀಯ_ವಂಶಪಾರಂಪರ್ಯ_ಪ್ರಾಣಿ‬
=> ಭಾರತ ಸರ್ಕಾರವು ಅಕ್ಟೋಬರ್ 23, 2010 ರಂದು ಆನೆಯನ್ನು ಭಾರತದ ವಂಶಪಾರಂಪರ್ಯ ಪ್ರಾಣಿ ಎಂದು ಘೋಷಿಸಿದೆ.
=> ಆನೆಯ ವೈಜ್ಞಾನಿಕ ಹೆಸರು - ಎಲಿಫಾಸ್ ಮ್ಯಾಕ್ಷಿಮಸ್ (elephas maximus)
=> ಭೂವಾಸಿಗಳಲ್ಲಿ ದೊಡ್ಡದಾದ ಪ್ರಾಣಿ - ಆಪ್ರಿಕಾದ ಆನೆ.
=> ಭಾರತದ ಆನೆಗಳ ಯೋಜನೆ ಜಾರಿಗೆ ತಂದ ವರ್ಷ - 1992.
=> ಭಾರತದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ - ಕರ್ನಾಟಕ.
=> ಕರ್ನಾಟಕದ ರಾಜ್ಯ ಪ್ರಾಣಿ - ಆನೆ.
14} ‪#‎ರಾಷ್ಟ್ರೀಯ_ಪ್ರಾಣಿ‬
=> 1972 ರಿಂದ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿ ಎಂದು ಘೋಷಿಸಲಾಯಿತು.
=> ಭಾರತದ ಮೊದಲ ರಾಷ್ಟ್ರೀಯ ಪ್ರಾಣಿ ಸಿಂಹವಾಗಿತ್ತು.
=> ಹುಲಿಯ ವೈಜ್ಞಾನಿಕ ಹೆಸರು - ಪ್ಯಾಂಥೇರಾ ಟ್ರೈಗಿಸ್. (Panthera tigris)
=> ಭಾರತದ ಮೊದಲ ಹುಲಿ ಅಭಯಾರಣ್ಯ - ಉತ್ತರಖಂಡದ ಕಾರ್ಬೆಟ್
=> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ - ಕರ್ನಾಟಕ.
=> ವಿಸ್ತೀರ್ಣದಲ್ಲಿ ಭಾರತದ ದೊಡ್ಡದಾದ ಹುಲಿ ಅಭಯರಾಣ್ಯ - ಆಂದ್ರಪ್ರದೇಶದ ನಾಗಾರ್ಜುನ ಸಾಗರ
=> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಅಭಯಾರಣ್ಯ - ಪಶ್ಚಿಮ ಬಂಗಾಳದ ಸುಂದರಬನ್ಸ್
=> ಭಾರತದಲ್ಲಿ ಹುಲಿ ಯೋಜನೆ ಜಾರಿಗೆ ಬಂದ ವರ್ಷ - 1972
15} ‪#‎ರಾಷ್ಟ್ರೀಯ_ಕಟ್ಟಡ‬
=> ದೆಹಲಿಯಲ್ಲಿರುವ ಇಂಡಿಯಾ ಗೇಟ್ ಇದನ್ನು ಎರಡನೇ ಮಹಾಯುದ್ದದಲ್ಲಿ ಮರಣ ಹೊಂದಿರುವ ಭಾರತೀಯ ಸೈನಿಕರ ನೆನಪಿಗಾಗಿ ಕಟ್ಟಿಸಲಾಗಿದೆ.
16} ‪#‎ರಾಷ್ಟ್ರೀಯ_ದೊರೆ‬
=> ಮೌರ್ಯ ವಂಶದ ಚಂದ್ರಗುಪ್ತ ಮೌರ್ಯ.

Dec 1, 2016

ನನ್ನ ಭಾರತ ಶ್ರೇಷ್ಠ ಭಾರತ

ಸೌರ ಮಂಡಲದಲ್ಲಿ ಎಂಟು ಗ್ರಹಗಳಿವೆ. ಆ ಎಂಟು ಗ್ರಹಗಳಲ್ಲಿ  ಭೂಮಿಯೇ ವಿಶೇಷವಾದ ಗ್ರಹ. ನಮ್ಮ ಭೂಮಿಯಲ್ಲಿ ಸಪ್ತ ಖಂಡಗಳಿವೆ. ಆ ಸಪ್ತ ಖಂಡಗಳಲ್ಲಿ ಏಷ್ಯ ಖಂಡ ಒಂದು. ಏಷ್ಯ ಖಂಡದಲ್ಲಿ ವಿಶೇಷವಾಗಿ ವಿಶಿಷ್ಟ ರೀತಿಯಲ್ಲಿ ನಿಂತಿರುವ್ ದೇಶವೇ ಭಾರತ. 

ಭಾರತ ಸುಂದರವಾದ ದೇಶ. ಯಾವ ದೇಶದವರಿಗಾದರು ಇಷ್ಟವಾಗುದೆ ಇರದು. ಭಾರತ ಪೂರ್ವ ಕಾಲದಿಂದಲು ತನ್ನದೆ ಆದ ರೀತಿಯಲ್ಲಿ ಬೆಳೆಯುತ್ತಾ ಬಂದಿದೆ. ಜಗ ತ್ತಿಗೆ ಸಾವಿರಾರು ಕೊಡುಗೆಗಳನ್ನು ನೀಡಿದೆ.ಭಾರತದ ಸಾವಿರಾರು ರಾಜಮಹಾರಾಜರುಗಳು ಒಬ್ಬರಿಗಿಂತ ಒಬ್ಬರು ಎಂಬಂತೆ ದೇಶ ಸೇವೆ ಮಾಡಿದ್ದರೆ.ಅನೇಕ ಕಾವ್ಯ ಶಾಸ್ತ್ರಗಳಿಗೆ ಜನ್ಮ ಸ್ಥಳ ಭಾರತ. ದೈವ ಭಾಷೆಯಾದ ಸಂಸ್ಕೃತದ ತವರೂರು ಭಾರತ.ಮಹಾಭಾರತ,ರಾಮಾಯಣ,ವೇದಗಳ ತವರು ಭಾರತ. ಮಸಾಲೆ ಪದಾರ್ಥಗಳಾದ ಮೆಣಸು ಇತ್ಯಾದಿಗಳ ಬೆಳೆಯಲು ಪ್ರಾರಂಭಿಸಿದ್ದು ಭಾರತದಲ್ಲಿಯೆ.ರೇಖಗಣಿತವು ನಮ್ಮ ಭಾರತದಲ್ಲಿ ಬಹಳ ಪ್ರಾಚೀನದಿಂದಲೆ ಇದೆ ಎಂಬುದಕ್ಕೆ ಉದಾಹರಣಿ ಹೋಮ ಕುಂಡಗಲನ್ನು ಜೊಡ್ಡಿಸುತ್ತಿದದ್ದು.ಅಂಕಗಣಿತಕ್ಕೆ ಶುನ್ಯವನ್ನು ಕೊಟ್ಟು ಅದನ್ನು ಮುಂದುವರಿಸಿದವರು ಭಾರತೀಯರು.ಬೀಜಗಣಿತದಲ್ಲು ಭಾರತಿಯರ ಮಹತ್ವದ ಕೊಡುಗೆ ಇದೆ. ಹೀಗೆ ಗಣಿತದಲ್ಲಿ ಭಾರತೀಯರ ಕೊಡುಗೆಯನ್ನು ಬರೆಯುತ್ತ ಹೋದರೆ ಸಾವಿರ ಉದಾಹರಣೆಯನ್ನು ಕೊಡಬಹುದು.ಭಾರತೀಯರು ಬುದ್ದಿವಂತರು,ಪೂರ್ವಕಲದಲ್ಲಿಯೇ ನಾವು ಅನೇಕ ವಿಷಯಗಳನ್ನು ಸಂಶೋಧಿಸಿದ್ದೆವು.ಉದಾಹರಣೆಗೆ ವೈದ್ಯಕೀಯ ಕ್ಷೇತ್ರದಲ್ಲಿ ನೊಡಿದರೆ ಶಸ್ತ್ರಚಿಕಿತ್ಸೆಯನ್ನು ಮೊದಲು ಪ್ರರಂಬಿಸಿದ್ದು ಭಾರತೀಯನಾದ ಶುಶ್ರುತ.ಆಯುರ್ವೇದವನ್ನು ಜಗತ್ತಿಗೆ ನೀಡಿದವರು ಭಾರತೀಯರು. ಆಯುರ್ವೇದ ಅತ್ಯಂತ ಪ್ರಾಚಿನವದದ್ದು,ಅಂದರೆ ಎಲ್ಲಾ ವೈದ್ಯಕೀಯ ಪ್ರಭೇದಗಳಿಗಿಂತಲು ಹಿಂದಿನದ್ದು.ಇದರಿಂದ ವೈದ್ಯಕೀಯ ಕ್ಷೆತ್ರಕ್ಕೆ ಭಾರತಿಯರು ಹೆಚ್ಚು ಒತ್ತು ನೀಡಿದವರು ಎಂಬುದನ್ನು ತಿಳಿಯಬಹುದು.ಅನೇಕ ರೋಗಗಳಿಗೆ ರಾಮಬಾಣದಂತಿರುವ ಅರಿಶಿಣವನ್ನು ಜಗತ್ತಿಗೆ ಪರಿಚಯಿಸಿದ್ದು ಭಾರತಿಯರು. ವಿಗ್ನಾನ ಕ್ಷೇತ್ರದಲ್ಲಿ ಭರತೀಯರ ಪ್ರಗತಿಯನ್ನು ನೋಡಬೇಕಾದರೆ ನೋಡಬೇಕಾದರೆ ನಮ್ಮ ದೇವಸ್ತಾನದ ಉದಹರನೆಯನ್ನು ತೆಗೆದು ಕೊೞಬಹುದು.ಭಾರತ ಯಾವ ಕ್ಷೇತ್ರದಲ್ಲಿ ತನ್ನ ಕೊಡುಗೆಯನ್ನು ನೀಡಿಲ್ಲ?ಭರತ ಎಲ್ಲಾ ದೇಶಗಳಿಗಿಂತ ವಿಭಿನ್ನವಾದದ್ದು.ಆದ್ದರಿಂದಲೇ ಅಲೆಕ್ಸಾಂಡರ್ ನ ವಲವು ಭಾರತದೆಡೆಗೆ ಮೂಡ್ಡಿದ್ದು.ಯುರೋಪನವರಿಗೂ ಸಹ ಭಾರತದ ಮೇಲೆ ಕುತೂಹಲ ಹೆಚ್ಚಾಗಿತ್ತು.ನಮ್ಮ ಯವೂದರಲ್ಲೂ ಕಮ್ಮಿ ಇಲ್ಲ,ಆದರೂ ಸಹ ಯಾಕೆ ಇಂದು ನಾವು ಬೇರೆ ದೇಶದ ಕಡೆಗೆ ಮುಖ ಮಾಡಿ ನೋಡುತ್ತಿದೇವೆ? ಮುತ್ತು ರತ್ನಗಳನ್ನು ಬೀದಿಯಲ್ಲಿ ಮಾರುತ್ತಿದ್ದ ನಮ್ಮ ದೇಶ ಯಾಕೆ ಇಂದು ಆರ್ತಿಕ ಬಿಕಟ್ಟು ಅನುಭವಿಸುತ್ತಿದೆ ಇದಕ್ಕೆ ಕಾರಣ ನಮ್ಮ ದೇಶದ ಬುದ್ದಿವಂತ ಪ್ರಜೆಗಲು ಬೇರೆ ದೇಶಕ್ಕೆ ಹಾರತ್ತಿರುವುದು.ಉತ್ತಮ ಅವಕಾಶಗಳು ಸಿಗದಿವುದು ಇದಕ್ಕೆ ಕರಣವಾಗಿರಬಹುದು.ಆದ್ದರಿಂದ ನಮ್ಮ ಸರ್ಕಾರ ಉತ್ತಮ ಅವಕಾಶಗಳನ್ನು ಒದಗಿಸಬೇಕು.ಈ ನಿಟ್ಟಿನಲ್ಲಿ ನಮ್ಮ ಪ್ರಾಧಾನಿ ನರೇಂದ್ರ ಮೋದಿಯವರ ಹೆಜ್ಜೆಗಳು ಪ್ರಶಂಶನೀಯ.ನಾವೇಲ್ಲರು ನಮ್ಮಲ್ಲಿ ರಾಷ್ಟ್ರಪ್ರೇಮ ರಾಷ್ಟ್ರಭಕ್ತಿಯನ್ನು ನಮ್ಮಲ್ಲಿ ಬೆಳಸಿಕೊೞಬೇಕು.ನಾವೆಲ್ಲರು ಒಂದಾಗಬೇಕು.ಭಾರತವನ್ನು ಮುಂದುವರಿಸಬೇಕು.ಭಾರತವನ್ನು ಉತುಂಗಕ್ಕೆ ಕೊಂಡ್ಯೊಯಬೇಕು.ವಂದೇ ಭಾರತ ಮಾತರಂ.ಜೈ ಭಾರತ ಮಾತೆ.